ಸಂದೀಪ್ ಶರ್ಮಾ 
ದೇಶ

ಮಧ್ಯಪ್ರದೇಶ: ಅಕ್ರಮ ಮರಳು ಸಾಗಣೆ ವರದಿ ಮಾಡಿದ್ದ ಪತ್ರಕರ್ತ ನಿಗೂಢ ಸಾವು, ಎಸ್ ಐಟಿ ತನಿಖೆಗೆ ಶಿಫಾರಸು

ಮಧ್ಯ ಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆ ಪ್ರಕರಣದ ತನಿಖಾ ವರದಿ ಪ್ರಕಟಿಸುತ್ತಿದ್ದ ರಾಷ್ಟ್ರೀಯ ಸುದ್ದಿ ವಾಹಿನಿಯ ಪತ್ರಕರ್ತ ಸಂದೀಪ್‌ ಶರ್ಮ.........

ಬಿಂಡ್(ಮಧ್ಯ ಪ್ರದೇಶ): ಮಧ್ಯ ಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆ ಪ್ರಕರಣದ ತನಿಖಾ ವರದಿ ಪ್ರಕಟಿಸುತ್ತಿದ್ದ ರಾಷ್ಟ್ರೀಯ ಸುದ್ದಿ ವಾಹಿನಿಯ ಪತ್ರಕರ್ತ ಸಂದೀಪ್‌ ಶರ್ಮಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗಿನ ಜಾವ ಸಂದೀಪ್ ಮೇಲೆ ಟ್ರಕ್‌ವೊಂದು ಅನುಮಾನಾಸ್ಪದವಾಗಿ ಹರಿದಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಅಕ್ರಮ ಮರಳು ದಂಧೆಗಳಲ್ಲಿ ರಾಜ್ಯದ ಪೋಲೀಸ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದ ಸಂದೀಪ್ ಈ ಕುರಿತಾದ ವರದಿಯೊಂದನ್ನು ತಯಾರು ಮಾಡಿದ್ದರು. ಅದರಲ್ಲಿ  ಪೋಲೀಸ್ ಅಧಿಕಾರಿ ಅಕ್ರಮದಲ್ಲಿ ತೊಡಗಿರುವ ಕುರಿತಂತೆ  ಫೋನ್‌ ಸಂಭಾಷಣೆ ದಾಖಲೆಗಳಿದ್ದವು. ಸುದ್ದಿ ವಾಹಿನಿಯಲ್ಲಿ ಆ ವರದಿ ಪ್ರಸಾರವಾದ ಬಳಿಕ ಪೋಲೀಸ್ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿತ್ತು. 
ಸುದ್ದಿ ಪ್ರಸಾರಗೊಂಡ ಬಳಿಕ ತನಗೆ ಬೆದರಿಕೆ ಕರೆಗಳು ಬರುತ್ತಿದೆ ಎಂದು ಸಂದೀಪ್ ದೂರು ನೀಡಿದ್ದರು.
ಇದೀಗ ಪತ್ರಕರ್ತ ಸಂದೀಪ್ ಶರ್ಮಾ ಸಾವನ್ನಪ್ಪಿದ್ದು ಇವರ ಸಾವಿನ ತನಿಖೆ ನಡೆಸಲು ಮಧ್ಯ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು(ಎಸ್ ಐಟಿ) ರಚನೆ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT