ಬಿಂಡ್(ಮಧ್ಯ ಪ್ರದೇಶ): ಮಧ್ಯ ಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆ ಪ್ರಕರಣದ ತನಿಖಾ ವರದಿ ಪ್ರಕಟಿಸುತ್ತಿದ್ದ ರಾಷ್ಟ್ರೀಯ ಸುದ್ದಿ ವಾಹಿನಿಯ ಪತ್ರಕರ್ತ ಸಂದೀಪ್ ಶರ್ಮಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗಿನ ಜಾವ ಸಂದೀಪ್ ಮೇಲೆ ಟ್ರಕ್ವೊಂದು ಅನುಮಾನಾಸ್ಪದವಾಗಿ ಹರಿದಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಅಕ್ರಮ ಮರಳು ದಂಧೆಗಳಲ್ಲಿ ರಾಜ್ಯದ ಪೋಲೀಸ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದ ಸಂದೀಪ್ ಈ ಕುರಿತಾದ ವರದಿಯೊಂದನ್ನು ತಯಾರು ಮಾಡಿದ್ದರು. ಅದರಲ್ಲಿ ಪೋಲೀಸ್ ಅಧಿಕಾರಿ ಅಕ್ರಮದಲ್ಲಿ ತೊಡಗಿರುವ ಕುರಿತಂತೆ ಫೋನ್ ಸಂಭಾಷಣೆ ದಾಖಲೆಗಳಿದ್ದವು. ಸುದ್ದಿ ವಾಹಿನಿಯಲ್ಲಿ ಆ ವರದಿ ಪ್ರಸಾರವಾದ ಬಳಿಕ ಪೋಲೀಸ್ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿತ್ತು.
ಸುದ್ದಿ ಪ್ರಸಾರಗೊಂಡ ಬಳಿಕ ತನಗೆ ಬೆದರಿಕೆ ಕರೆಗಳು ಬರುತ್ತಿದೆ ಎಂದು ಸಂದೀಪ್ ದೂರು ನೀಡಿದ್ದರು.
ಇದೀಗ ಪತ್ರಕರ್ತ ಸಂದೀಪ್ ಶರ್ಮಾ ಸಾವನ್ನಪ್ಪಿದ್ದು ಇವರ ಸಾವಿನ ತನಿಖೆ ನಡೆಸಲು ಮಧ್ಯ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು(ಎಸ್ ಐಟಿ) ರಚನೆ ಮಾಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos