ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ 
ದೇಶ

ಪ್ರಧಾನಿ ನರೇಂದ್ರಮೋದಿ ಭಾಷಣಕ್ಕೆ ರಾಜ್ಯಸಭೆಯಲ್ಲಿ ಅಡ್ಡಿ

ರಾಜ್ಯಸಭೆಯಲ್ಲಿಂದು ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ಎದ್ದುನಿಂತಾಗ ಪ್ರತಿಪಕ್ಷಗಳಿಂದ ತೀವ್ರ ಅಡ್ಡಿ ಉಂಟಾಯಿತು.

ನವದೆಹಲಿ : ರಾಜ್ಯಸಭೆಯಲ್ಲಿಂದು ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ಎದ್ದುನಿಂತಾಗ  ಪ್ರತಿಪಕ್ಷಗಳಿಂದ ತೀವ್ರ ಅಡ್ಡಿ ಉಂಟಾಯಿತು.

ತ್ರಿವಳಿ ತಲಾಕ್ ನಿಷೇಧ ಸೇರಿದಂತೆ ಹಲವು ಮಹತ್ವದ ಬಿಲ್ ಗಳು ಕಾನೂನಿನ ಮಾನ್ಯತೆ ನೀಡಲು ಚರ್ಚೆ ನಡೆಯಬೇಕಾಗಿದೆ ಆದರೆ, ಪ್ರತಿಪಕ್ಷಗಳು ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ನರೇಂದ್ರಮೋದಿ ಅಸಮಾಧಾನ ವ್ಯಕ್ತಪಡಿಸಿದರು.

 ಪ್ರತಿಪಕ್ಷಗಳ ಅಡ್ಡಿಯ ನಡುವೆಯೂ ಮಾತು ಮುಂದುವರೆಸಿದ ಪ್ರಧಾನಿ ತ್ರಿವಳಿ ತಲಾಕ್ ಚರ್ಚೆಯ ಸಂದರ್ಭದಲ್ಲಿ ನಿವೃತ್ತರಾಗುತ್ತಿರುವ ಸದಸ್ಯರು ಸಂಸತ್ತಿನ ಭಾಗವಾಗದಿರುವುದು   ದುರದೃಷ್ಟಕರ ಎಂದರು.

ಹೊರಹೊಗುತ್ತಿರುವ ಸದಸ್ಯರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಿ ಸುಗಮ ಕಲಾಪಕ್ಕೆ ಪ್ರತಿಪಕ್ಷಗಳು ಮಾತ್ರವಲ್ಲದೇ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ ಎಂದರು.

ಭಾರತದ ಪ್ರಜಾಪ್ರಭುತ್ವದಲ್ಲಿ ರಾಜ್ಯಸಭೆಯ ಪಾತ್ರ ಮಹತ್ವದಾಗಿದ್ದು, ಅನೇಕ ದಿಗ್ಗಜ ಸದಸ್ಯರು ಸೇವೆ ಸಲ್ಲಿಸಿದ್ದಾರೆ ಎಂದು ಗುಣಗಾನ ಮಾಡಿದ್ದರು. ಆದರೆ, ಪ್ರಧಾನಿ ಭಾಷಣಕ್ಕೆ ಪ್ರತಿಪಕ್ಷಗಳ ಸದಸ್ಯರು ಅಡ್ಡಿಪಡಿಸುತ್ತಲೇ ಇದ್ದರು.






Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT