ಎಐಎಡಿಎಂಕೆ ಸಂಸದ ಎ. ನವನೀತಕೃಷ್ಣನ್ 
ದೇಶ

ಕಾವೇರಿ ವಿವಾದ; ಆತ್ಮಹತ್ಯೆ ಬೆದರಿಕೆ ಹಾಕಿದ ಎಐಎಡಿಎಂಕೆ ಸಂಸದ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಐಡಿಎಂಕೆ ಸಂಸದರೊಬ್ಬರು ಗುರುವಾರ ಕೇಂದ್ರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ...

ಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೂಚನೆಯಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಐಡಿಎಂಕೆ ಸಂಸದರೊಬ್ಬರು ಗುರುವಾರ ಕೇಂದ್ರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. 
ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಐಎಡಿಎಂಕೆ ಸಂಸದ ಎ. ನವನೀತಕೃಷ್ಣನ್ ಅವರು, ಮಾರ್ಚ್ 29ರೊಳಗಾಗಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡದೇ ಹೋದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 
ಕಾವೇರಿ ವಿವಾದ ಕುರಿತಂತೆ ಅಂತಿಮ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ 6 ವಾರಗಳ ಕಾಲಾವಕಾಶವನ್ನು ಕೇಂದ್ರಕ್ಕೆ ನೀಡಿತ್ತು. ಆದರೆ, ಈ ವರೆಗೂ ಕೇಂದ್ರ ಈ ಬಗ್ಗೆ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿಯವರು, ಗಡುವಿನೊಳಗಾಗಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT