ಸಾಂದರ್ಭಿಕ ಚಿತ್ರ 
ದೇಶ

ಕಾವೇರಿ ವಿವಾದ ಎಎಐಎಡಿಎಂಕೆ ಸಂಸದ ಎಸ್ ಆರ್ ಮುತ್ತುಕರುಪ್ಪನ್ ರಾಜೀನಾಮೆಗೆ ಮುಂದು

ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವಲ್ಲಿ ಕೇಂದ್ರಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಸಂಸದ ಎಸ್ ಆರ್ ಮುತ್ತುಕರುಪ್ಪನ್ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ನವದೆಹಲಿ : ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವಲ್ಲಿ ಕೇಂದ್ರಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಸಂಸದ ಎಸ್ ಆರ್ ಮುತ್ತುಕರುಪ್ಪನ್  ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಇದು ನನ್ನ ವೈಯಕ್ತಿಕ ನಿರ್ಧಾರವಾಗಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಯಾವುದೇ ಕ್ರಮ ಕೈಗೊಳ್ಳದ ಕೇಂದ್ರಸರ್ಕಾರ ವಿರುದ್ಧ ಪ್ರತಿಭಟನೆಗಾಗಿ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಕಾವೇರಿ ವಿಚಾರ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರಮೋದಿ ತಿರಸ್ಕರಿಸುತ್ತಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಮುತ್ತುಕರುಪ್ಪನ್, ಅವರ ಆರು ವರ್ಷಗಳ ಅವಧಿಯಲ್ಲಿ ಇನ್ನೂ ಎರಡು ವರ್ಷ ಬಾಕಿ ಇದೆ. ಕೆಲ ದಿನಗಳಲ್ಲಿಯೇ ರಾಜ್ಯಸಭೆಯ ಸಭಾಪತಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!