ಸಂಗ್ರಹ ಚಿತ್ರ 
ದೇಶ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಇದ್ದಿದ್ದರೆ ಇನ್ನೂ 15 ಸ್ಥಾನ ಹೆಚ್ಚು ಗೆಲ್ಲಬಹುದಿತ್ತು: ಚಂದ್ರಬಾಬು ನಾಯ್ಡು

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರದೇ ಏಕಾಂಗಿಯಾಗಿ ಟಿಡಿಪಿ ಚುನಾವಣೆ ಸ್ಪರ್ಧಿಸಿದ್ದರೆ ಇನ್ನೂ 15 ಸ್ಥಾನಗಳಲ್ಲಿ ಜಯ ಸಾಧಿಸಬಹುದಿತ್ತು ಎಂದು ಆಂದ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಅಮರಾವತಿ: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರದೇ ಏಕಾಂಗಿಯಾಗಿ ಟಿಡಿಪಿ ಚುನಾವಣೆ ಸ್ಪರ್ಧಿಸಿದ್ದರೆ ಇನ್ನೂ 15 ಸ್ಥಾನಗಳಲ್ಲಿ ಜಯ ಸಾಧಿಸಬಹುದಿತ್ತು ಎಂದು ಆಂದ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಶುಕ್ರವಾರ ಅಮರಾವತಿಯಲ್ಲಿ ನಡೆದ ಟಿಡಿಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಚಂದ್ರಬಾಬು ನಾಯ್ಡು, ತಾವು ತಮ್ಮ ಪಕ್ಷ ರಾಜಕೀಯ ಲಾಭಕ್ಕಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ್ದೆವು ಎಂದು ಹೇಳಲಾಗುತ್ತಿದೆ. ಆದರೆ ಆ ಆರೋಪಗಳು ಸತ್ಯಕ್ಕೆ ದೂರವಾದದ್ದು. ಅಂದು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಇದ್ದಿದ್ದರೆ ನಮ್ಮ ಪಕ್ಷ ಇನ್ನೂ 15 ಹೆಚ್ಚುವರಿ ಸ್ಥಾನಗಳಲ್ಲಿ ಜಯ ಸಾಧಿಸುತ್ತಿತ್ತು. ಆದರೆ ನಮಗೆ ವಿಭಜಿತ ಆಂಧ್ರ ಪ್ರದೇಶದ ಅಭಿವೃದ್ಧಿ ಮುಖ್ಯವಾಗಿತ್ತು. ಹೀಗಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದೆವು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಟಿಡಿಪಿ ಬಗ್ಗೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸಿದ್ದವಿಲ್ಲ. ಆದರೆ ಇಂದಿಗೂ ಉತ್ತರ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ರಾಜ್ಯದ ಲಾಭ ನೀಡಲಾಗುತ್ತಿದೆ. ವಿಶೇಷ ಸ್ಥಾನಮಾನ ನಮ್ಮ ಹಕ್ಕು..ನಮ್ಮ ಹಕ್ಕಿಗಾಗಿ ನಾನು ಕೊನೆಯವರೆಗೂ ಹೋರಾಡುತ್ತೇವೆ ಎಂದು ಹೇಳಿದರು.
ಕಳೆದ ಮಾರ್ಚ್ ಮೊದಲ ವಾರದಲ್ಲಿ ಟಿಡಿಪಿ ಬಿಜೆಪಿ ಮೈತ್ರಿ ಮುರಿದುಬಿದ್ದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT