ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಂಬೇಡ್ಕರ್ ಪ್ರತಿಮೆ ಧ್ವಂಸ, ಪರಿಸ್ಥಿತಿ ಉದ್ವಿಗ್ನ

ಉತ್ತರ ಪ್ರದೇಶದಲ್ಲಿ ಒಂದೇ ದಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಎರಡು ಪ್ರತಿಮೆಗಳನ್ನು....

ಸಿದ್ದಾರ್ಥ್ ನಗರ: ಉತ್ತರ ಪ್ರದೇಶದಲ್ಲಿ ಒಂದೇ ದಿನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಎರಡು ಪ್ರತಿಮೆಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು, ಅಲಹಬಾದ್ ಮತ್ತು ಸಿದ್ಧಾರ್ಥ್ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲಹಬಾದ್ ನಂತರ ಸಿದ್ಧಾರ್ಥ್ ನಗರದ ಗೋಹಿನಿಯಾ ಗ್ರಾಮದಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಅಪರಿಚಿತ ವ್ಯಕ್ತಿಗಳು ಧ್ವಂಸಗೊಳಿಸಿದ್ದು, ಕೃತ್ಯವನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಪ್ರತಿಮೆ ಧ್ವಂಸಗೊಳಿಸಿರುವುದು ಪತ್ತೆಯಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಪ್ರತಿಭಟನೆ ನಡೆಸುತ್ತಿದ್ದಾರೆ. 
ಧ್ವಂಸಗೊಂಡ ಪ್ರತಿಮೆಯನ್ನು ಸ್ಥಳಾಂತರಿಸಲಾಗಿದ್ದು, ಈ ಸಂಬಂಧ ಅಪರಿಚಿತರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಧರ್ಮವೀರ್ ಅವರು ತಿಳಿಸಿದ್ದಾರೆ.
ಇದಕ್ಕು ಮುನ್ನ ಅಲಹಬಾದ್ ನ ತ್ರಿವೇಣಿಪುರಂ ನಲ್ಲಿರುವ ಪಾರ್ಕ್ ವೊಂದರಲ್ಲಿದ್ದ ಅಂಬೇಡ್ಕರ್ ಪ್ರತಿಮೆಯ ತಲೆ ಭಾಗವನ್ನು ತುಂಡರಿಸಲಾಗಿತ್ತು. ಪ್ರಕರಣ ನಮ್ಮ ಗಮನಕ್ಕೆ ಬಂದಿದ್ದು,  ಶೀಘ್ರವೇ ಆರೋಪಿಗಳನ್ನು ಬಂದಿಸಿವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT