ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ 
ದೇಶ

39 ಭಾರತೀಯರ ಮೃತದೇಹಗಳನ್ನು ಮರಳಿ ತರಲು ಇರಾಕ್ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ: ವಿಕೆ ಸಿಂಗ್

ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಹತ್ಯೆಗೀಡಾಗಿದ್ದ 39 ಭಾರತೀಯ ಅವಶೇಷಗಳನ್ನು ಮರಳಿ ತರಲು ಇರಾಕ್ ಸರ್ಕಾರ ಒಪ್ಪಿಗಾಗಿ ಕಾಯುತ್ತಿದ್ದೇವೆಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಹತ್ಯೆಗೀಡಾಗಿದ್ದ 39 ಭಾರತೀಯ ಮೃತದೇಹಗಳನ್ನು ಮರಳಿ ತರಲು ಇರಾಕ್ ಸರ್ಕಾರ ಒಪ್ಪಿಗಾಗಿ ಕಾಯುತ್ತಿದ್ದೇವೆಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, 39 ಭಾರತೀಯ ಮೃತದೇಹಗಳ ಹಸ್ತಾಂತರ ಕುರಿತಂತೆ ಕಾನೂನಾತ್ಮಕ ಪ್ರಕ್ರಿಯೆಗಳು ಮುಕ್ತಾಯಗೊಂಡಿದ್ದು, ಮೃತದೇಹಗಳನ್ನು ಭಾರತಕ್ಕೆ ತರಲು ನವದೆಹಲಿ ಬಾಗ್ದಾದ್ ನ ಒಪ್ಪಿಗೆಗಾಗಿ ಕಾಯುತ್ತಿದೆ ಎಂದು ಹೇಳಿದ್ದಾರೆ. 
39 ಭಾರತೀಯರ ಅವಶೇಷಗಳ ಕುರಿತ ಕಾನೂನಾತ್ಮಕ ಪ್ರಕ್ರಿಯೆಗಳು ಈಗಾಗಲೇ ಪೂರ್ಣಗೊಂಡಿದ್ದು, ನವದೆಹಲಿ ಇದೀಗ ಬಾಗ್ದಾದ್ ಒಪ್ಪಿಗೆಗಾಗಿ ಕಾಯುತ್ತಿದೆ. ಬಾಗ್ದಾದ್ ರಾಯಭಾರಿಗಳು ಒಪ್ಪಿಗೆ ನೀಡುತ್ತಿದ್ದಂತೆಯೇ ಸಿ-17 ವಿಮಾನದ ಮೂಲಕ ಇರಾಕ್ ತೆರಳಿ ಅವಶೇಷಗಳನ್ನು ಭಾರತಕ್ಕೆ ತರಲಾಗುತ್ತದೆ. ನಂತರ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೃತರ ಕುಟುಂಬಸ್ಥರು ವಿಮಾನ ನಿಲ್ದಾಣಕ್ಕೆ ಬರುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. 
ಬಾಗ್ದಾದ್'ಗೆ ತೆರಳಿ ಅವಶೇಷಗಳನ್ನು ಪಡೆದುಕೊಂಡ ಬಳಿಕ ಅಲ್ಲಿಂದ ಅಮೃತಸರ ಹಾಗೂ ಹಿಮಾಚಲಪ್ರದೇಶ, ಕೋಲ್ಕತಾ, ಪಾಟ್ನಾಗೆ ತೆರಳಿ ಮೃತರ ಕುಟಂಬಸ್ಥರಿಗೆ ಅವಶೇಷಗಳನ್ನು ಹಸ್ತಾಂತರ ಮಾಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT