ಸುರೇಂದ್ರ ಸಿಂಗ್ 
ದೇಶ

ಅತ್ಯಾಚಾರ ಪ್ರಕರಣಗಳಿಗೆ ಪೋಷಕರೇ ಹೊಣೆ: ಉತ್ತರ ಪ್ರದೇಶ ಬಿಜೆಪಿ ಶಾಸಕ

ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಪೋಷಕರೇ ಹೊಣೆಯಾಗಿದ್ದು, ಮಕ್ಕಳನ್ನು ಮುಕ್ತವಾಗಿ ತಿರುಗಾಡಲು....

ಲಖನೌ: ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಪೋಷಕರೇ ಹೊಣೆಯಾಗಿದ್ದು, ಮಕ್ಕಳನ್ನು ಮುಕ್ತವಾಗಿ ತಿರುಗಾಡಲು ಬಿಡಬಾರದು ಎಂದು ಉತ್ತರ ಪ್ರದೇಶ ಆಡಳಿತರೂಢ ಬಿಜೆಪಿ ಶಾಸಕರೊಬ್ಬರು ಮಂಗಳವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಎರಡು–ಮೂರು ಮಕ್ಕಳ ತಾಯಿ ಮೇಲೆ ಯಾರೂ ಅತ್ಯಾಚಾರ ಎಸಗುವುದಿಲ್ಲ ಎಂದಿದ್ದ ಬಲಿಯಾ ಜಿಲ್ಲೆಯ ಬೈರಿಯಾ ಕ್ಷೇತ್ರದ ಬಿಜೆಪ ಶಾಸಕ ಸುರೇಂದ್ರ ಸಿಂಗ್ ಅವರು ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಮಕ್ಕಳಿಗೆ ಮೊಬೈಲ್ ಕೊಡಬೇಡಿ ಎಂದು ಪೋಷಕರಿಗೆ ಸಲಹೆ ನೀಡಿದ್ದಾರೆ.
ಅತ್ಯಾಚಾರ ಪ್ರಕರಣಗಳು ಹೆಚ್ಚಾಗಲು ಯುವಕರ ತಂದೆ-ತಾಯಿಯೇ ಕಾರಣ. ಏಕೆಂದರೆ ಅವರು ತಮ್ಮ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂದಿದ್ದಾರೆ.
15 ವರ್ಷದವರೆಗೆ ಮಕ್ಕಳ ಮೇಲೆ ಕಟ್ಟು ನಿಟ್ಟಿನ ನಿಗಾ ವಹಿಸಬೇಕು ಮತ್ತು ಇದು ಪೋಷಕರ ಕರ್ತವ್ಯ. ಆದರೆ ಹಾಗೆ ಮಾಡದೇ ಮಕ್ಕಳನ್ನು ಮುಕ್ತವಾಗಿ ಬಿಡುತ್ತಿರುವುದೇ ಅತ್ಯಾಚಾರ ಹೆಚ್ಚಾಗಲು ಕಾರಣ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ.
ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಮಾಧ್ಯಮಗಳಿಗೆ ಮಸಾಲೆ ಆಗದಿರಿ ಎಂದು ಪಕ್ಷದ ಮುಖಂಡರಿಗೆ ಸಲಹೆ ನೀಡಿದ ನಂತರವೂ ಸುರೇಂದ್ರ ಸಿಂಗ್ ಅವರು ಎರಡು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT