ಕೇಜ್ರಿವಾಲ್ 
ದೇಶ

ಕಾರ್ಮಿಕರಿಗೆ ದಿನಕ್ಕೆ ಕ್ಯಾಲೋರಿಗಳ ಲೆಕ್ಕದಲ್ಲಿ ವೇತನ ನೀಡಲು ಸಾಧ್ಯವಿಲ್ಲ: ಸಮಿತಿ ವಿರುದ್ಧ ಸಿಎಂ ಕೇಜ್ರಿವಾಲ್ ಕೆಂಡಾಮಂಡಲ

ದೆಹಲಿಯ ಕಾರ್ಮಿಕರ ವೇತನವನ್ನು ಹೆಚ್ಚಳ ಮಾಡಿದ್ದ ಸಮಿತಿ, ಕಾರ್ಮಿಕರಿಗೆ ದಿನವೊಂದಕ್ಕೆ 2,700 ಕ್ಯಾಲೋರಿಗಳು ಬೇಕಾಗುತ್ತದೆ ಎಂದು ಹೇಳಿದ್ದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿಯ ಕಾರ್ಮಿಕರ ವೇತನವನ್ನು ಹೆಚ್ಚಳ ಮಾಡಿದ್ದ ಸಮಿತಿ, ಕಾರ್ಮಿಕರಿಗೆ ದಿನವೊಂದಕ್ಕೆ 2,700 ಕ್ಯಾಲೋರಿಗಳು ಬೇಕಾಗುತ್ತದೆ ಎಂದು ಹೇಳಿದ್ದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೆಂಡಾಮಂಡಲರಾಗಿದ್ದಾರೆ. 
ದೆಹಲಿ ಕಾರ್ಮಿಕರ ತಿಂಗಳ ಕನಿಷ್ಠ ವೇತನವನ್ನು 9,500 ರೂಪಾಯಿಗಳಿಂದ 13,500 ಗಳಿಕೆ ಏರಿಕೆ ಮಾಡಲಾಗಿತ್ತು. ವೇತನ ಪರಿಷ್ಕರಣೆ ಮಾಡಿರುವ ಸಮಿತಿ ಕಾರ್ಮಿಕರಿಗೆ ದಿನವೊಂದಕ್ಕೆ 2,700 ಕ್ಯಾಲೊರಿಗಳ ಅಗತ್ಯವಿರುತ್ತದೆ ಎಂದು ಹೇಳಿದೆ. 
ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ದೆಹಲಿ ಸಿಎಂ ಕೇಜ್ರಿವಾಲ್, ಕ್ಯಾಲೊರಿಗಳಿಗೆ ತಕ್ಕಂತೆ ಕಾರ್ಮಿಕರಿಗೆ ವೇತನ ನೀಡಲಾಗುವುದಿಲ್ಲ. ಕಾರ್ಮಿಕರು ಮನುಷ್ಯರು, ಪ್ರಾಣಿಗಳಲ್ಲ. ಕಾರ್ಮಿಕರು ತಮ್ಮ ಮಕ್ಕಳನ್ನು ಓದಿಸಬೇಕಾಗುತ್ತದೆ. 
ಅವರಿಗೆ ಬಟ್ಟೆ ತೆಗೆದುಕೊಡಬೇಕಾಗುತ್ತದೆ. ಐಎಎಸ್ ಅಧಿಕಾರಿಗಳಿಗೆ ಕ್ಯಾಲೊರಿಗಳ ಅಗತ್ಯತೆಗೆ ತಕ್ಕಂತೆ ವೇತನ ನೀಡಬಹುದು ಆದರೆ ಕಾರ್ಮಿಕರಿಗೆ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಮೇ.1 ರಂದು ಕಾರ್ಮಿಕ ದಿನಾಚರಣೆಯ ಅಂಗವಾಗಿ ಕಾರ್ಮಿಕರ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ವೇಳೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT