ಏರ್ಸೆಲ್ ಮ್ಯಾಕ್ಸಿಸ್‌ ಪ್ರಕರಣ: ಜು.10ರವರೆಗೆ ಕಾರ್ತಿ ಚಿದಂಬರಂ ಬಂಧನವಿಲ್ಲ 
ದೇಶ

ಏರ್ಸೆಲ್ ಮ್ಯಾಕ್ಸಿಸ್‌ ಪ್ರಕರಣ: ಜು.10ರವರೆಗೆ ಕಾರ್ತಿ ಚಿದಂಬರಂ ಬಂಧನವಿಲ್ಲ

2ಜಿ ಹಗರಣ ಸಂಬಂಧ ಏರ್ಸೆಲ್ ಮ್ಯಾಕ್ಸಿಸ್‌ ವಿಷಯದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪುತ್ರ........

ನವದೆಹಲಿ: 2ಜಿ ಹಗರಣ ಸಂಬಂಧ ಏರ್ಸೆಲ್ ಮ್ಯಾಕ್ಸಿಸ್‌ ವಿಷಯದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಜುಲೈ 10ರ ತನಕ ಬಂಧನದಿಂದ ರಕ್ಷಣೆ ನಿಡಿರುವುದಾಗಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಕಾರ್ತಿ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತ ವಾದಕ್ಕೆ ಕಾಲಾವಕಾಶ ಕೋರಿದ ಜಾರಿ ನಿರ್ದೇಶನಾಲಯ  ಮನವಿ ಸಲ್ಲಿಸಿತ್ತು. ಇದನ್ನು ಅನುಸರಿಸಿ ವಿಶೇಷ ನ್ಯಾಯಾಧೀಶರಾದ ಒ ಪಿ ಸೈನಿ ಕಾರ್ತಿ ಚಿದಂಬರಂ ಗೆ ಜುಲೈ 10ರವರೆಗೂ ಬಂಧನದಿಂದ ರಕ್ಷಣೆ ನಿಡುವುದಾಗಿ ಆದೇಶಿಸಿದರು.
ಜಾರಿ ನಿರ್ದೇಶನಾಲಯದ ಪರ ವಕೀಲ ನಿತೇಶ್‌ ರಾಣಾ ಇದೇ ಕೇಸಿನ ಸಂಬಂಧದ ಒಂದು ಪ್ರಕರಣ ಸರ್ವೋಚ್ಚ ನ್ಯಾಯಾಲಯದ ಮುಂದಿದೆ. ಹೀಗಾಗಿ ಈ ವಿಚಾರಣೆಯನ್ನು ಮುಂದೂಡಬೇಕಿದೆ ಎಂದು ಕೋರಿಕೆ ಸಲ್ಲಿಸಿದ್ದರು. ಜುಲೈ 2ರಂದು ತಾನು ಇಅರ ಸಂಬಂಧ ವಾದ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದ ವಾದವನ್ನು ಬೆಂಬಲಿಸಿದ್ದ ಸಿಬಿಐ ಪ್ರಕರಣದ ವಿಚಾರಣೆ ಮುಂದೂಡುವಂತೆ ತಾನೂ ಮನವಿ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT