ಕಡಿತಕ್ಕೊಳಗಾಗಿರುವ ಮರಗಳು 
ದೇಶ

'ಆಹಾ ಎಂಥಾ ಭದ್ರತೆ'...ರಾಜಭವನದ ಆವರಣದಲ್ಲೇ ಗಂಧದ ಮರ ಕಳ್ಳತನ!

ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್​ ರಾವ್​ ಅವರ ನಿವಾಸದಲ್ಲಿ ಗಂಭೀರ ಭದ್ರತಾ ಲೋಪ ಕಂಡುಬಂದಿದ್ದು, ರಾಜಭವನದ ಆವರಣದಲ್ಲಿದ್ದ 4 ಗಂಧದ ಮರಗಳನ್ನು ಕಳ್ಳರ ಕದ್ದೊಯ್ದಿದ್ದಾರೆ.

ಪುಣೆ: ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್​ ರಾವ್​ ಅವರ ನಿವಾಸದಲ್ಲಿ ಗಂಭೀರ ಭದ್ರತಾ ಲೋಪ ಕಂಡುಬಂದಿದ್ದು, ರಾಜಭವನದ ಆವರಣದಲ್ಲಿದ್ದ 4 ಗಂಧದ ಮರಗಳನ್ನು ಕಳ್ಳರ ಕದ್ದೊಯ್ದಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿರುವ ರಾಜಭವನದ ಆವರಣದಲ್ಲಿ ಬೆಳೆಸಲಾಗಿದ್ದ ಸುಮಾರು 20 ಸಾವಿರ ರೂ ಮೌಲ್ಯದ 4 ಮರಗಳನ್ನು ಕದೀಮರು ಕದ್ದು ಸಾಗಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.  ಮೂಲಗಳ ಪ್ರಕಾರ ಏಪ್ರಿಲ್ 30ರಂದು ಈ ಘಟನೆ ನಡೆದಿದ್ದು, ಘಟನೆಯಲ್ಲಿ ರಾಜಭವನದ ಭದ್ರತಾ ಅಧಿಕಾರಿಗಳ ಕೈವಾಡ ಕೂಡ ಇದೆ ಎಂದು ಶಂಕಿಸಲಾಗಿದೆ. ಆರಂಭದಲ್ಲಿ ಈ ಬಗ್ಗೆ ಯಾರಿಗೂ ಅನುಮಾನ ಮೂಡಿರಲಿಲ್ಲ. ಆದರೆ ರಾಜಭವನದಲ್ಲಿ ತೋಟದ ಕೆಲಸಗಾರರು ಕೆಲಸ ಮಾಡುತ್ತಿದ್ದ ವೇಳೆ ಅವರು ಮರ ಕಡಿದಿರುವುದನ್ನು ಗಮನಿಸಿದ್ದಾರೆ. ಆ ಮೂಲಕ ಈ ಪ್ರಕರಣ ಹೊರ ಬಿದ್ದಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ರಾಷ್ಟ್ರಪತಿ, ಪ್ರಧಾನ ಮಂತ್ರಿ, ಲೋಕಸಭೆ ಸ್ಪೀಕರ್​ ಹಾಗೂ ಇನ್ನಿತರ ಸರ್ಕಾರಿ ಅಧಿಕಾರಿಗಳು ಪುಣೆಗೆ ಭೇಟಿ ನೀಡಿದಾಗ ತಂಗುವ ಜಾಗ ಇದಾಗಿದ್ದು, ರಾಜಭವನದ ಹತ್ತಿರದಲ್ಲೇ ಪೊಲೀಸ್​ ಠಾಣೆ ಇದ್ದರೂ ಭದ್ರತಾ ಲೋಪ ಉಂಟಾಗಿರುವುದು ಆತಂಕ ಸೃಷ್ಟಿಸಿದೆ. ಕೃತ್ಯ ಎಸಗಿರುವವರ ವಿರುದ್ಧ ಈಗಾಗಲೇ ಛತುಶೃಂಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT