ಕಡಿತಕ್ಕೊಳಗಾಗಿರುವ ಮರಗಳು 
ದೇಶ

'ಆಹಾ ಎಂಥಾ ಭದ್ರತೆ'...ರಾಜಭವನದ ಆವರಣದಲ್ಲೇ ಗಂಧದ ಮರ ಕಳ್ಳತನ!

ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್​ ರಾವ್​ ಅವರ ನಿವಾಸದಲ್ಲಿ ಗಂಭೀರ ಭದ್ರತಾ ಲೋಪ ಕಂಡುಬಂದಿದ್ದು, ರಾಜಭವನದ ಆವರಣದಲ್ಲಿದ್ದ 4 ಗಂಧದ ಮರಗಳನ್ನು ಕಳ್ಳರ ಕದ್ದೊಯ್ದಿದ್ದಾರೆ.

ಪುಣೆ: ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್​ ರಾವ್​ ಅವರ ನಿವಾಸದಲ್ಲಿ ಗಂಭೀರ ಭದ್ರತಾ ಲೋಪ ಕಂಡುಬಂದಿದ್ದು, ರಾಜಭವನದ ಆವರಣದಲ್ಲಿದ್ದ 4 ಗಂಧದ ಮರಗಳನ್ನು ಕಳ್ಳರ ಕದ್ದೊಯ್ದಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿರುವ ರಾಜಭವನದ ಆವರಣದಲ್ಲಿ ಬೆಳೆಸಲಾಗಿದ್ದ ಸುಮಾರು 20 ಸಾವಿರ ರೂ ಮೌಲ್ಯದ 4 ಮರಗಳನ್ನು ಕದೀಮರು ಕದ್ದು ಸಾಗಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.  ಮೂಲಗಳ ಪ್ರಕಾರ ಏಪ್ರಿಲ್ 30ರಂದು ಈ ಘಟನೆ ನಡೆದಿದ್ದು, ಘಟನೆಯಲ್ಲಿ ರಾಜಭವನದ ಭದ್ರತಾ ಅಧಿಕಾರಿಗಳ ಕೈವಾಡ ಕೂಡ ಇದೆ ಎಂದು ಶಂಕಿಸಲಾಗಿದೆ. ಆರಂಭದಲ್ಲಿ ಈ ಬಗ್ಗೆ ಯಾರಿಗೂ ಅನುಮಾನ ಮೂಡಿರಲಿಲ್ಲ. ಆದರೆ ರಾಜಭವನದಲ್ಲಿ ತೋಟದ ಕೆಲಸಗಾರರು ಕೆಲಸ ಮಾಡುತ್ತಿದ್ದ ವೇಳೆ ಅವರು ಮರ ಕಡಿದಿರುವುದನ್ನು ಗಮನಿಸಿದ್ದಾರೆ. ಆ ಮೂಲಕ ಈ ಪ್ರಕರಣ ಹೊರ ಬಿದ್ದಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ರಾಷ್ಟ್ರಪತಿ, ಪ್ರಧಾನ ಮಂತ್ರಿ, ಲೋಕಸಭೆ ಸ್ಪೀಕರ್​ ಹಾಗೂ ಇನ್ನಿತರ ಸರ್ಕಾರಿ ಅಧಿಕಾರಿಗಳು ಪುಣೆಗೆ ಭೇಟಿ ನೀಡಿದಾಗ ತಂಗುವ ಜಾಗ ಇದಾಗಿದ್ದು, ರಾಜಭವನದ ಹತ್ತಿರದಲ್ಲೇ ಪೊಲೀಸ್​ ಠಾಣೆ ಇದ್ದರೂ ಭದ್ರತಾ ಲೋಪ ಉಂಟಾಗಿರುವುದು ಆತಂಕ ಸೃಷ್ಟಿಸಿದೆ. ಕೃತ್ಯ ಎಸಗಿರುವವರ ವಿರುದ್ಧ ಈಗಾಗಲೇ ಛತುಶೃಂಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT