ಬಿರುಗಾಳಿ 
ದೇಶ

ರಾಜಸ್ತಾನ, ಉತ್ತರಪ್ರದೇಶದಲ್ಲಿ ಭಾರೀ ಬಿರುಗಾಳಿ, ಮಳೆಗೆ 100 ಬಲಿ

ರಾಜಸ್ತಾನ ಹಾಗೂ ಉತ್ತರಪ್ರದೇಶದಲ್ಲಿ ಭಾರೀ ಗಾಳಿ, ಮಳೆ, ಧೂಳಿನ ಚಂಡಮಾರುತಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ...

ನವದೆಹಲಿ: ರಾಜಸ್ತಾನ ಹಾಗೂ ಉತ್ತರಪ್ರದೇಶದಲ್ಲಿ ಭಾರೀ ಗಾಳಿ, ಮಳೆ, ಧೂಳಿನ ಚಂಡಮಾರುತಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 
ಬುಧವಾರ ಸಂಜೆ ಸುರಿದ ಭಾರೀ ಮಳೆ ಹಾಗೂ ಚಂಡಮಾರುತಕ್ಕೆ ಎರೂಡ ರಾಜ್ಯಗಳಲ್ಲಿ ಹಲವು ಮನೆಗಳು ಕುಸಿದಿವೆ. ಅಲ್ಲದೆ ಎರಡು ರಾಜ್ಯಗಳ ಜನತೆಗೆ ಸಾಕಷ್ಟು ತೊಂದರೆಯಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 
ಉತ್ತರಪ್ರದೇಶದಲ್ಲಿ ಧೂಳಿನ ಚಂಡಮಾರುತಕ್ಕೆ 64 ಮಂದಿ ಬಲಿಯಾಗಿದ್ದರೆ, 160ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಈ ಪೈಕಿ ಆಗ್ರಾದಲ್ಲಿ ಅತೀ ಹೆಚ್ಚು ಅಂದರೆ ಮಕ್ಕಳು ಸೇರಿ 43 ಮಂದಿ ಮೃತಪಟ್ಟಿದ್ದಾರೆ. 
ರಾಜಸ್ಥಾನಗದ ಆಳ್ವಾರ್, ಭರತ್ ಪುರ್ ಮತ್ತು ದೋಲ್ಪುರ್ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಈ ವರೆಗೂ ವಿವಿಧ ಪ್ರಕರಣಗಳಲ್ಲಿ 31 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಭಾರಿ ಗಾತ್ರದ ಮರಗಳೂ ಕೂಡ ನೆಲಕ್ಕುರುಳಿವೆ. ಮಳೆಯಿಂದಾಗಿ ರಾಜಸ್ಥಾನದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ವಿದ್ಯುತ್ ಕಡಿತವಾಗಿದೆ. ರಾಜಧಾನಿ ದೆಹಲಿಯಿಂದ 164 ಕಿ.ಮೀ ದೂರದಲ್ಲಿರುವ ಆಳ್ವಾರ್ ನಲ್ಲೂ ಸಂಪೂರ್ಣ ವಿದ್ಯುತ್ ಕಡಿತವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT