ದುರಂತಕ್ಕೀಡಾದ ಬಸ್ಸಿನ ಚಿತ್ರ 
ದೇಶ

ಬಿಹಾರ ಬಸ್ಸು ದುರಂತದಲ್ಲಿ 27 ಮಂದಿ ಸತ್ತಿಲ್ಲ - ಅಧಿಕೃತ ಮಾಹಿತಿ

ನಿನ್ನೆ ಸಂಭವಿಸಿದ್ದ ಮೊತಿಹರಿ ಬಸ್ ದುರಂತದಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಬಿಹಾರ ವಿಪತ್ತು ನಿರ್ವಹಣಾ ಸಚಿವ ದಿನೇಶ್ ಚಂದ್ರ ಯಾದವ್ ಸ್ಪಷ್ಟನೆ ನೀಡಿದ್ದಾರೆ.

ಬಿಹಾರ :  ನಿನ್ನೆ ಸಂಭವಿಸಿದ್ದ ಮೊತಿಹರಿ ಬಸ್ ದುರಂತದಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ  ಎಂದು ಬಿಹಾರ ವಿಪತ್ತು ನಿರ್ವಹಣಾ ಸಚಿವ ದಿನೇಶ್  ಚಂದ್ರ ಯಾದವ್ ಸ್ಪಷ್ಟನೆ ನೀಡಿದ್ದಾರೆ.

ಸ್ಥಳೀಯ ಮಾಹಿತಿ ಆಧಾರಿಸಿ  27 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದೆ. ಆದರೆ, ಇದು ತಪ್ಪು ಮಾಹಿತಿ. ಅಂತಿಮ ಮಾಹಿತಿಯನ್ನು ಮಾತ್ರ ಪರಿಗಣಿಸುವುದಾಗಿ ಅವರು ಹೇಳಿದ್ದಾರೆ.

ಮುಜಾಫರ್ ನಗರಿಂದ ನವದೆಹಲಿಗೆ ತೆರಳುತ್ತಿದ್ದ ಬಸ್ಸು ರಾಷ್ಟ್ರೀಯ ಹೆದ್ದಾರಿ 28 ರ ಬಳಿಯ ಬೆಲ್ವಾ ಹಳ್ಳಿಯ ಬಳಿ ಕಂದಕಕ್ಕೆ ಉರುಳಿ ಬೆಂಕಿ ಹೊತ್ತಿಕೊಂಡಿತ್ತು.

 ಬಸ್ಸು ಖಾಸಗಿ ಸಂಸ್ಥೆಗೆ ಸೇರಿದ್ದಾಗಿದ್ದು, ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಬಸ್ಸು ಅಪಘಾತ ಸಂಭವಿಸಿತ್ತು ಎಂಬುದಾಗಿ ಪ್ರತ್ಯೇಕ್ಷದರ್ಶಿಗಳು ಹೇಳಿಕೆ ನೀಡಿದ್ದರು.  ಬಸ್ಸಿನಲ್ಲಿ ಮುಜಾಫರ್ ನಗರದ 32 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಬಸ್ಸನ್ನು ಕಂದಕದಿಂದ ಹೊರಗೆ ಎಳೆದಾಗ ಯಾವುದೇ ಮನುಷ್ಯರ ಗುರುತು ಪತ್ತೆಯಾಗಿಲ್ಲ ಎಂದು ಮುಜಾಫರ್ ನಗರ ವಲಯ ಐಜಿ  ಸುನೀಲ್ ಕುಮಾರ್  ಹೇಳಿದ್ದಾರೆ.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT