ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಪ್ರಧಾನಿ ಮೋದಿ

ಮಹಿಳೆಯರ ವಿಕಾಸದಿಂದ, ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖದತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ಮಹಿಳೆಯರ ವಿಕಾಸದಿಂದ, ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖದತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. 
ನಮೋ ಆ್ಯಪ್ ಮೂಲಕ ಕರ್ನಾಟಕದ ಬಿಜೆಪಿ ಮಹಿಳಾ ಮೋರ್ಚಾದೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿಯವರು, ಮಹಿಳೆಯರ ನೇತೃತ್ವದಲ್ಲಿ ಮಹಿಳಾ ವಿಕಾಸವೆಂಬ ಮಂತ್ರದೊಂದಿಗೆ ಬಿಜೆಪಿ ಕೆಲಸ ಮಾಡುತ್ತಿದೆ. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಅತ್ಯಂತ ಪ್ರಮುಖವಾದದ್ದು, ನಮ್ಮ ಎಲ್ಲಾ ಕಾರ್ಯಕ್ರಮದಲ್ಲೂ ಮಹಿಳೆಯರಿಗೆ ಪ್ರಥಮ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 
ಇಂದು ನಮ್ಮ ದೇಶ ಮಹಿಳಾ ವಿಕಾಸದಿಂದ, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖದತ್ತ ಸಾಗುತ್ತಿದೆ. ಮಹಿಳೆಯರ ವಿಕಾಸವೆಂಬ ಮಂತ್ರದೊಂದಿಗೆ ಬಿಜೆಪಿ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಸಮಾನ ಹಕ್ಕು ದೊರಕಿಸಿಕೊಡುವತ್ತ ನಮ್ಮ ಪಕ್ಷ ಕೆಲಸ ಮಾಡುತ್ತಿದೆ. ನಮ್ಮ ಸಂಪುಟದಲ್ಲಿ ರಕ್ಷಣಾ ಮಂತ್ರಿ ಹಾಗೂ ವಿದೇಶಾಂಗ ಸಚಿವೆ ಇಬ್ಬರೂ ಮಹಿಳೆಯರೇ ಆಗಿದ್ದು, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಪ್ರಮುಖವಾಗಿದೆ. ಮಹಿಳೆಯರು ಎಲ್ಲರಿಗೂ ಸರಳ ಭಾಷೆಯಲ್ಲಿ ತಿಳಿಸುತ್ತಾರೆ. ಹೀಗಾಗಿ ಮಹಿಳೆಯರು ಅಭಿವೃದ್ಧಿಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದ್ದಾರೆಂದು ಪ್ರಶಂಸಿಸಿದ್ದಾರೆ. 
ಬಳಿಕ ಮಹಿಳೆಯರಿಗಾಗಿ ಜಾರಿಗೆ ತಂದ ಯೋಜನೆಗಳ ಪ್ರಸ್ತಾಪ ಮಾಡಿರುವ ಮೋದಿಯವರು, ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಪ್ರಸ್ತಾಪಿಸಿ, ಇದರಿಂದ ಮಹಿಳಾ ತಾರತಮ್ಯ ನಿವಾರಣೆಯಾಗಿದೆ ಎಂದು ತಿಳಿಸಿದ್ದಾರೆ. 
ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ. ಜನಧನ್ ಯೋಜನೆ ಅಡಿಯಲ್ಲಿ 16.42ಕೋಟಿ ಫಲಾನುಭವಿಗಳಿದ್ದಾರೆ. ಸ್ಟ್ಯಾಂಡ್ ಆಫ್ ಇಂಡಿಯಾ ಮೂಲಕ 8000 ಕೋಟಿಗೂ ಅಧಿಕ ಸಾಲ ನೀಡಲಾಗಿದೆ. ಮುದ್ರಾ ಯೋಜನೆಯಡಿ 9 ಕೋಟಿ ಮಹಿಳಾ ಫಲಾನುಭವಿಗಳಿದ್ದಾರೆಂದಿದ್ದಾರೆ. 
ಹೆರಿಗೆ ರಜೆಯನ್ನು 12 ವಾರಗಳಿಂದ 26 ವಾರಗಳಿಗೆ ಏರಿಕೆ, 50ಕ್ಕಿಂತ ಅಧಿಕ ಕೆಲಸಗಾರರಿರುವ ಕಡೆ ಕಡ್ಡಾಯ ಶಿಶು ಗೃಹ ವ್ಯವಸ್ಥೆ, ಹೆಣ್ಣುಮಗುವಿನ ಭವಿಷ್ಯದ ಸುರಕ್ಷತೆಗಾಗಿ ಸುಕನ್ಯಾ ಸಮೃದ್ಧಿ ಯೋಜನೆ, ಸುರಕ್ಷಿತ ಮಾತೃತ್ವ ಅಭಿಯಾನದಡಿ ಉಚಿತ ಆರೋಗ್ಯ ಸೇವೆ ಹಾಗೂ ಕರ್ನಾಟಕದಲ್ಲಿ 9.34 ಲಕ್ಷ ಜನರಿಗೆ ಉಚಿತ ಎಲ್'ಪಿಜಿ ಸೇವೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT