ಛಗನ್ ಭುಜಬಲ್ 
ದೇಶ

2 ವರ್ಷ ಜೈಲು ವಾಸದ ನಂತರ ಛಗನ್ ಭುಜಬಲ್ ಗೆ ಜಾಮೀನು

ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ....

ಮುಂಬೈ: ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎನ್ ಸಿಪಿ ಮುಖಂಡ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಛಗನ್ ಭುಜಬಲ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಛಗನ್ ಭುಜಬಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2016ರಲ್ಲಿ ಬಂಧಿಸಿದ್ದರು. 
ಛಗನ್ ಭುಜಬಲ್ ಅವರು ರಾಜ್ಯ ಲೋಕೋಪಯೋಗಿ ಸಚಿವರಾಗಿದ್ದ ವೇಳೆ ಅಕ್ರಮ ಹಣ ವಹಿವಾಟು ನಡೆಸಿದ್ದಾರೆ ಮತ್ತು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಭುಜಬಲ್ ಅವರ ಪುತ್ರ ಮತ್ತು ಎನ್ ಸಿಪಿ ಶಾಸಕ ಪಂಕಜ್ ಹಾಗೂ ಅವರ ಸಂಬಂಧ ಸಮೀರ್ ಸಹ ಮನಿ ಲಾಂಡ್ರಿಂಗ್ ಪ್ರಕರಣದ ಆರೋಪಿಗಳಾಗಿದ್ದಾರೆ.
ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!

2ನೇ ಟಿ20: ಭಾರತಕ್ಕೆ 214 ಬೃಹತ್ ರನ್ ಗುರಿ ನೀಡಿದ ಆಫ್ರಿಕಾ

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ಗೆ ಷರತ್ತುಬದ್ಧ ಜಾಮೀನು!

ರಾಜಸ್ಥಾನ: ಒತ್ತಡ ತಡೆಯಲಾಗದೇ ಕುಸಿದು ಬಿದ್ದು ಬಿಎಲ್ಒ ಸಾವು!

ಸಿದ್ದರಾಮಯ್ಯ 'ದಾಖಲೆಯ ಸಿಎಂ' ಆಗ್ತಾರಾ? ಡಿ.ಕೆ ಶಿವಕುಮಾರ್ ಕಾಲೆಳೆದ ಯತ್ನಾಳ್!

SCROLL FOR NEXT