ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆ ಕಚ್ಚುತ್ತವೆ: ಉತ್ತರ ಪ್ರದೇಶ ಸಚಿವೆಯ ವಿವಾದಾತ್ಮಕ ಹೇಳಿಕೆ 
ದೇಶ

ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆ ಕಚ್ಚುತ್ತವೆ: ಉತ್ತರ ಪ್ರದೇಶ ಸಚಿವೆಯ ಹೇಳಿಕೆ

ಉತ್ತರ ಪ್ರದೇಶದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಡಿನ್ನರ್ ವಿತ್ ದಲಿತ್ಸ್ ಅಭಿಯಾನದಿಂದ ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಮತ್ತೊಂದು ಘಟನೆ ನಡೆದಿದ್ದು, ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆಗಳು

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಡಿನ್ನರ್ ವಿತ್ ದಲಿತ್ಸ್ ಅಭಿಯಾನದಿಂದ ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಮತ್ತೊಂದು ಘಟನೆ ನಡೆದಿದ್ದು, ದಲಿತರ ಮನೆಯಲ್ಲಿ ಇಡೀ ರಾತ್ರಿ ಸೊಳ್ಳೆಗಳು ಕಚ್ಚುತ್ತವೆ ಎಂದು ಉತ್ತರ ಪ್ರದೇಶ ಶಿಕ್ಷಣ ಸಚಿವೆ ಅನುಪಮ ಜೈಸ್ವಾಲ್ ಹೇಳಿದ್ದಾರೆ.
ಸರ್ಕಾರದ ಯೋಜನೆಗಳು ದಲಿತರನ್ನು ತಲುಪುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಮಾತನಾಡುತ್ತಿದ್ದ ಉತ್ತರ ಪ್ರದೇಶ ಶಿಕ್ಷಣ ಸಚಿವೆ ಅನುಪಮ ಜೈಸ್ವಾಲ್, ಸಮಸ್ಯೆಗಳ ನಡುವೆಯೂ ಸರ್ಕಾರದ ಯೋಜನೆಗಳನ್ನು ದಲಿತರಿಗೆ ತಲುಪಿಸುತ್ತಿರುವುದಕ್ಕೆ ಸಂತೃಪ್ತಿ ಇದೆ ಎಂದು ಹೇಳಿದ್ದಾರೆ. 
ಸರ್ಕಾರದ ಯೋಜನೆಗಳು ಸರಿಯಾಗಿ ತಲುಪುತ್ತಿವೆ.  ಫಲಾನುಭವಿಗಳ ಮನೆಗಳಿಗೆ ತೆರಳುತ್ತಿರುವ ಸಚಿವರು ರಾತ್ರಿ ಇಡೀ ಸೊಳ್ಳೆಗಳಿಂದ ಕಚ್ಚಿಸಿಕೊಳ್ಳುತ್ತಾರೆ. ಆದರೆ ಅವೆಲ್ಲಕ್ಕಿಂತ ಸಚಿವರುಗಳಿಗೆ ಉತ್ತಮ ಅನುಭವ ಸಿಗುತ್ತಿದೆ.  ಸಚಿವರುಗಳಿಗೆ ಎರಡು ಕ್ಷೇತ್ರಗಳಲ್ಲಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನೀಡಿದರೆ ನಾಲ್ಕು ಕ್ಷೇತ್ರಗಳಿಗೆ ತೆರಳುತ್ತೇನೆಂಬ ವಿಶ್ವಾಸ ಕಾಣಿಸುತ್ತಿದೆ.  ಕೆಲಸಗಳಲ್ಲಿ ತೃಪ್ತಿ ಕಾಣಿಸುತ್ತಿದೆ. ನಾನೂ ಸಹ ನನಗೆ ವಹಿಸಿರುವ ಮನೆಗಳಿಗಿಂತ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳು ತಲುಪುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತಿದ್ದೇನೆ ಎಂದು ಅನುಪಮ ಜೈಸ್ವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT