ಒಡಿಶಾ: ಕರಡಿಯೊಡನೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ಸಾವು, ವೀಡಿಯೋ ವೈರಲ್ 
ದೇಶ

ಒಡಿಶಾ: ಕರಡಿಯೊಡನೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ಸಾವು, ವೀಡಿಯೋ ವೈರಲ್

ಪ್ರಾಣಿಗಳೊಡನೆ ಸೆಲ್ಫಿ ತೆಗೆಸಿಕೊಳ್ಳ ಹೋಗಿ ಅವಾಂತರ ಮಾಡಿಕೊಂಡ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದೆ.

ನಬರಂಗ್ಪುರ(ಒಡಿಶಾ): ಪ್ರಾಣಿಗಳೊಡನೆ ಸೆಲ್ಫಿ ತೆಗೆಸಿಕೊಳ್ಳ ಹೋಗಿ ಅವಾಂತರ ಮಾಡಿಕೊಂಡ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದೆ. ಇದೀಗ ಒಡಿಶಾದಲ್ಲಿ ಸಹ ಅಂತಹುದೇ ಘಟನೆ ನಡೆದಿದ್ದು ಯುವಕನೊಬ್ಬ ಕರಡಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿ ಮೃತಪಟ್ಟಿದ್ದಾನೆ.
ಕಾಟಪಾಡ್ ನಿಂದ ಪಾಪದಹಂಡಿಗೆ ಬೊಲೆರೋ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಭು ಭಾತ್ರಾ ಕರಡಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ದುರ್ದೈವಿ. 
ಟ್ಯಾಕ್ಷಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಭು ಭಾತ್ರಾ ವಿವಾಹ ಕಾರ್ಯಕ್ರಮ ಮುಗಿಸಿ ಸ್ನೇಹಿತರು, ಕುಟುಂಬದವರೊಡನೆ ವಾಪಾಸಾಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಕರಡಿಯೊಂದನ್ನು ಕಂಡಿದ್ದಾನೆ. ತಕ್ಷಣ ಅದರ ಜತೆ ಸೆಲ್ಫಿ ತೆಗೆದುಕೊಳ್ಳಲು ಧಾವಿಸಿದ್ದಾನೆ. ಆಗ ಕರಡಿ ಅವನ ಮೇಲೆ ದಾಳಿ ನಡೆಸಿದೆ. 
ಸಹ ಪ್ರಯಾಣಿಕರು ಆತನನ್ನು ಕರಡಿಯಿಂದ ಬಿಡಿಸಲು ಮುಂದಾದರೂ ಕರಡಿ ಮಾತ್ರ ಅವನನ್ನು ಬಿಡದೆ ಕಚ್ಚಿ ಗಾಯಗೊಳಿಸಿದೆ.
ಸಹ ಪ್ರಯಾಣಿಕರೊಬ್ಬರು ಈ ಎಲ್ಲಾ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.ಅಲ್ಲದೆ ಪ್ರಕರಣದ ಕುರಿತಂತೆ ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳು ಸ್ಥಳಕ್ಕಾಗಮಿಸಿ ಕರಡಿಯಿಂದ ಪ್ರಭು ಮೃತ ದೇಹವನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT