ಆರ್ನಾಬ್ ಗೋಸ್ವಾಮಿ 
ದೇಶ

ಆತ್ಮಹತ್ಯೆಗೆ ಪ್ರಚೋದನೆ, ರಿಪಬ್ಲಿಕ್ ಟಿವಿ ಆರ್ನಬ್‌ ಗೋಸ್ವಾಮಿ ವಿರುದ್ಧ ಎಫ್ಐಆರ್

ಒಳಾಂಗಣ ಅಲಂಕಾರ ಕಲಾವಿದರೊಬ್ಬರಿಗೆ ಆತ್ಮಹತ್ಯೆಗೆ ಪ್ರೇರಣೆ ನಿಡಿದ್ದರೆನ್ನುವ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಚಾನೆಲ್‌ನ ಪ್ರಧಾನ ಸಂಪಾದಕ....

ರಾಯಗಢ(ಮಹಾರಾಷ್ಟ್ರ): ಒಳಾಂಗಣ ಅಲಂಕಾರ ಕಲಾವಿದರೊಬ್ಬರಿಗೆ ಆತ್ಮಹತ್ಯೆಗೆ ಪ್ರೇರಣೆ ನಿಡಿದ್ದರೆನ್ನುವ ಆರೋಪದ ಮೇಲೆ ರಿಪಬ್ಲಿಕ್‌ ಟಿವಿ ಚಾನೆಲ್‌ನ ಪ್ರಧಾನ ಸಂಪಾದಕ ಹಾಗೂ ಆಡಳಿತ ನಿರ್ದೇಶಕ ಆರ್ನಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಹಾರಾಷ್ಟ್ರದ ರಾಯಗಢದಲ್ಲಿನ ಆಲಿಬಾಗ್‌ನ ಬಂಗಲೆಯಲ್ಲಿ ಶನಿವಾರ ಬೆಳಿಗ್ಗೆ ಒಳಾಂಗಣ ಅಲಂಕಾರ ಕಲಾವಿದರೊಬ್ಬ ಆತ್ಮಹತ್ಯೆಗೆ ಶರಣಗಿದ್ದರು. ಆಕೆಯ ಪತ್ನಿ ನಿಡಿದ್ದ ದೂರಿನ ಆಧಾರದಲ್ಲಿ ರಾಯಗಢ ಪೋಲೀಸರು ಆರ್ನಬ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಳಾಂಗಣ ಅಲಂಕಾರ ಕಲಾವಿದ ಅನ್ವಯ್‌ ನಾಯ್ಕ್‌ ಆತ್ಮಹತ್ಯೆಗೆ ಮುನ್ನ ಬರೆದ ಡೆತ್ ನೊಟ್ ನಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ  ಆರ್ನಬ್‌ ಗೋಸ್ವಾಮಿ, ಲೊಕಾಸ್ಟ್‌ಎಕ್ಸ್‌ನ ಫಿರೋಜ್‌ ಶೇಖ್‌ ಹಾಗು ಸ್ಮಾರ್ಟ್‌ ವರ್ಕ್ಸ್‌ನ ನಿತೇಶ್‌ ಸರ್ದಾ ಅವರ ಹೆಸರಿದೆ. "ನಾನುರಿಪಬ್ಲಿಕ್ ಟಿವಿ ಕಛೇರಿಯ ಒಳಾಂಗಣ ವಿನ್ಯಾಸ ನೆರವೇರಿಸಿದ್ದು ಅದಕ್ಕೆ ಇದುವರೆಗೆ ಹಣ ಪಾವತಿ ಆಗಿಲ್ಲ" ಎಂದು ಡೆತ್ ನೊಟ್ ನಲ್ಲಿ ಅವರು ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಕ್ರಯಿಸಿರುವ ರಿಪಬ್ಲಿಕ್ ಟಿವಿ ತನ್ನ ಮೇಲಿನ ಆರೋಪಗಳನ್ನು ಅಲ್ಲಗಳೆದಿದೆ. ಇಂಟೀರಿಯಲ್ ಡೆಕಾರೇಟರ್ ಗೆ ಗುತ್ತಿಗೆ ಆಧಾರದಲ್ಲಿ ಎಷ್ಟು ಹಣ ಪಾವತಿಸಬೇಕಾಗಿತ್ತೋ ಅಷ್ಟೂ ಹಣ ಪಾವತಿಯಾಗಿದೆ. ಸಂಸ್ಥೆ ಯಾವ ಬಾಕಿ ಉಳಿಸಿಕೊಂಡಿಲ್ಲ’ ಎಂದು ಸಂಸ್ಥೆ ಸ್ಪಷ್ಟನೆ ಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT