ದೇಶ

ವಿತ್ತ ಸಚಿವಾಲಯ ಮುಚ್ಚಿದೆ: ಸಚಿವ ಜೇಟ್ಲಿ, ಪ್ರಧಾನಿ ಮೋದಿ ಕುರಿತು ರಾಹುಲ್ ವ್ಯಂಗ್ಯಭರಿತ ಪತ್ರ

Manjula VN
ನವದೆಹಲಿ: ನಾಯಕರ ಗೈರುಹಾಜರುಗಳಿಂದಾಗಿ ಕೇಂದ್ರ ವಿತ್ತ ಸಚಿವಾಲಯ ಬಣಗುಡುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕುರಿತು ಮಂಗಳವಾರ ಲೇವಡಿ ಮಾಡಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ನಾಯಕರು ಗೈರು ಹಾಜರಾಗಿದ್ದರೂ ಮೋದಿ ಸರ್ಕಾರ ಸಚಿವಾಲಯವನ್ನು ನಡೆಸುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. 
ಅನಾರೋಗ್ಯದಿಂದಾಗಿ ಸಚಿವ ಅರುಣ್ ಜೇಟ್ಲಿಯವರು ಕಳೆದ ಏಪ್ರಿಲ್ ತಿಂಗಳಿನಿಂದ ಗೈರು ಹಾಜರಾಗಿದ್ದಾರೆ. ಇದರಂತೆ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಹಸ್ಮುಖ್ ಆದಿಯಾ ಅವರು ಕೂಡ ತಮ್ಮ ಆಧ್ಯಾತ್ಮಿಕ ಗುರವಿನೊಂದಿಗೆ ಆತ್ಮ ಶಾಂತಿಯನ್ನು ಅರಸಿ ಮೈಸೂರಿಗೆ ತೆರಳಲು ಮೇ.20ರವರೆಗೂ ರಜೆ ಪಡೆದುಕೊಂಡಿದ್ದಾರೆ. ಹೀಗಾಗಿ ನಾನು ಕೇಂದ್ರ ಹಣಕಾಸು ಸಚಿವಾಲಯವನ್ನು ಮುಚ್ಚಲು ನಿರ್ಧರಿಸಿದ್ದೇನೆ. ಪ್ರಧಾನಮಂತ್ರಿಗಳ ಕಚೇರಿ ಈ ಮೊದಲಿನಂತೆಯೇ ಎಲ್ಲಾ ಹಣಕಾಸು ನೀತಿಗಳ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. 
SCROLL FOR NEXT