ಗುಜರಾತ್ ಹೈಕೋರ್ಟ್ 
ದೇಶ

2002 ಗುಜರಾತ್ ಹಿಂಸಾಚಾರ: 14 ಮಂದಿಗೆ ಜೀವವಾಧಿ ಶಿಕ್ಷೆ, ನಾಲ್ವರು ನಿರ್ದೋಷಿ; ಹೈಕೋರ್ಟ್ ತೀರ್ಪು

2002 ರಲ್ಲಿ ಗುಜರಾತಿನಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣದ 14 ಮಂದಿ ಆರೋಪಿಗಳಿಗೆ ಗುಜರಾತ್ ಹೈಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ನಾಲ್ವರನ್ನು ನಿರ್ದೋಷಿಗಳೆಂದು ಘೋಷಿಸಿದೆ.

ಅಹಮದಾಬಾದ್ : 2002 ರಲ್ಲಿ ಗುಜರಾತಿನಲ್ಲಿ  ಸಂಭವಿಸಿದ ಹಿಂಸಾಚಾರ ಪ್ರಕರಣದ 14 ಮಂದಿ ಆರೋಪಿಗಳಿಗೆ  ಗುಜರಾತ್ ಹೈಕೋರ್ಟ್  ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ನಾಲ್ವರನ್ನು ನಿರ್ದೋಷಿಗಳೆಂದು ಘೋಷಿಸಿದೆ.

 ಇದೇ ಪ್ರಕರಣದಲ್ಲಿ ಉಳಿದ ಏಳು ಮಂದಿಗೆ ಏಳು ವರ್ಷಗಳ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಈ ಪ್ರಕರಣ ಸಂಬಂಧ 23  ಮಂದಿಯನ್ನು ಆರೋಪಿಗಳೆಂದು ವಿಶೇಷ  ವಿಚಾರಣಾ ನ್ಯಾಯಾಲಯ  ಘೋಷಿಸಿತ್ತು,

 ಕಳೆದ ಆಗಸ್ಟ್ ತಿಂಗಳಲ್ಲಿ ಪ್ರಕರಣದ  ವಿಚಾರಣೆ ನಡೆಸಿದ್ದ  ನ್ಯಾಯಾಧೀಶರಾದ ಹರ್ಷ ದೇವಾನಿ ಮತ್ತು ಎ.ಎಸ್. ಸುಪೇಹಿಯಾ ಅವರನ್ನೊಳಗೊಂಡ ಪೀಠ, ಆದೇಶವನ್ನು ಕಾಯ್ದಿರಿಸಿತ್ತು.

2012ರಲ್ಲಿ ಎಸ್ ಐಟಿ  ವಿಶೇಷ ನ್ಯಾಯಾಲಯ 32 ಮಂದಿಗೆ  ಜೀವವಾಧಿ ಶಿಕ್ಷೆಯನ್ನು ಪ್ರಕಟಿಸಿತ್ತು. ಬಿಜೆಪಿಯ ಸಚಿವ ಮಾಯಾ ಕೊದನಾನಿ ಕೂಡಾ ಆರೋಪಿಯಾಗಿದ್ದು, 28 ವರ್ಷದ ಶಿಕ್ಷೆ ವಿಧಿಸಲಾಗಿತ್ತು. ಭಜರಂಗ ದಳದ ನಾಯಕ ಬಾಬು ಭಜರಂಗಿಗೆ ಸಾಯುವವರೆಗೂ ಜೈಲು ಶಿಕ್ಷೆ ಘೋಷಿಸಲಾಗಿತ್ತು.

ಇದನ್ನು ಹೊರತು ಪಡಿಸಿ  ಏಳು  ಮಂದಿ ಆರೋಪಿಗಳಿಗೆ  21 ವರ್ಷದ  ಜೈಲು ಶಿಕ್ಷೆ , ಉಳಿದವರಿಗೆ 14 ವರ್ಷದ ಸಾಜಾ  ಜೈಲು ಶಿಕ್ಷೆಯನ್ನು ನೀಡಲಾಗಿತ್ತು.ಎಲ್ಲಾ ಆರೋಪಿಗಳು ತಮ್ಮ ಅಪರಾಧದ ವಿರುದ್ಧ  ಹೈಕೋರ್ಟ್  ಗೆ ಮೇಲ್ಮನವಿ ಸಲ್ಲಿಸಿದ್ದರು.

2002 ಫೆಬ್ರವರಿ 27 ರಂದು ಗೋದ್ರಾ ರೈಲು ನಿಲ್ದಾಣದಲ್ಲಿ ಸಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ್ದರಿಂದ 58 ಮಂದಿ ಜೀವ ಕಳೆದುಕೊಂಡಿದ್ದರು.

 ಈ ಪ್ರಕರಣ ಖಂಡಿಸಿ ಫೆ. 28 ರಂದು ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗ ನೀಡಿದ್ದ ಗುಜರಾತ್ ಬಂದ್  ವೇಳೆ ನರೋಡಾ ಪಾಟೀಯಾದಲ್ಲಿ   ಉದ್ರೀಕ್ತರು  97 ಮಂದಿ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT