ಲಾಲು ಪ್ರಸಾದ್ ಯಾದವ್ 
ದೇಶ

ಮೇವು ಹಗರಣ: ಲಾಲುಗೆ 6 ವಾರಗಳ ತಾತ್ಕಾಲಿಕ ಜಾಮೀನು

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ....

ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಆರು ವಾರಗಳ ಕಾಲ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.
ಪುತ್ರ ತೇಜ್ ಪ್ರತಾಪ್ ಯಾದವ್ ಮದುವೆಯಲ್ಲಿ ಭಾಗವಹಿಸುವುದಕ್ಕಾಗಿ ಈಗಾಗಲೇ ಮೂರು ದಿನಗಳ ಕಾಲ ಪೆರೋಲ್ ಪಡೆದಿದ್ದು, ಈಗ ಅನಾರೋಗ್ಯದ ಹಿನ್ನೆಲೆಯಲ್ಲಿ ತಾತ್ಕಾಲಿಕ ಜಾಮೀನು ಪಡೆದಿದ್ದಾರೆ.
ಲಾಲು ಪುತ್ರ ಹಾಗೂ ಹಾಲಿ ಆರ್ ಜೆಡಿ ಶಾಸಕ ತೇಜ್ ಪ್ರತಾಪ್ ಅವರು ಮೇ 12ರಂದು ಆರ್ ಜೆಡಿ ಶಾಸಕಿ ಚಂದ್ರಿಕಾ ರೈ ಅವರ ಪುತ್ರಿ ಐಶ್ವರ್ಯ ರೈ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈ ಶುಭ ಗಳಿಗೆಯಲ್ಲಿ ಭಾಗವಹಿಸುವುದಕ್ಕಾಗಿ ಲಾಲು ಪ್ರಸಾದ್ ಯಾದವ್ ಅವರು ಪೆರೋಲ್ ಪಡೆದಿದ್ದಾರೆ. 
ಮೇವು ಹಗರಣಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಲಾಲು ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಬಿರ್ಸಾ ಮುಂಡ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಲಾಲು ಅವರನ್ನು ಅನಾರೋಗ್ಯದ ಕಾರಣ ಏಮ್ಸ್ ಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ರಾಂಚಿಯ ಆರ್‌ಐಎಂಎಸ್ ಗೆ ದಾಖಲಿಸಲಾಗಿತ್ತು. ಅನಾರೋಗ್ಯದ ಕಾರಣ ಏ.18ರಂದು ತೇಜ್‌ ಪ್ರತಾಪ್‌ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಲಾಲು ಪಾಲ್ಗೊಂಡಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT