ಸಾಂದರ್ಭಿಕ ಚಿತ್ರ 
ದೇಶ

ಬರೋಬ್ಬರಿ ರೂ.8.64 ಲಕ್ಷ ವಿದ್ಯುತ್ ಬಿಲ್ ನೋಡಿ ಆಘಾತ; ತರಕಾರಿ ವ್ಯಾಪಾರಿ ಆತ್ಮಹತ್ಯೆಗೆ ಶರಣು

ಬರೋಬ್ಬರಿ ರೂ.8.64 ಲಕ್ಷ ವಿದ್ಯುತ್ ಬಿಲ್ ನೋಡಿ ಆಘಾತಗೊಂಡ ತರಕಾರಿ ವ್ಯಾಪಾರಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಭರತ್ ನಗರದಲ್ಲಿ ಗುರುವಾರ ನಡೆದಿದೆ...

ಔರಂಗಾಬಾದ್; ಬರೋಬ್ಬರಿ ರೂ.8.64 ಲಕ್ಷ ವಿದ್ಯುತ್ ಬಿಲ್ ನೋಡಿ ಆಘಾತಗೊಂಡ ತರಕಾರಿ ವ್ಯಾಪಾರಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಭರತ್ ನಗರದಲ್ಲಿ ಗುರುವಾರ ನಡೆದಿದೆ. 
ಜಗನ್ನಾಥ್ ನೆಹಾಜಿ ಶೆಲ್ಕೆ (36) ಆತ್ಮಹತ್ಯೆಗೆ ಶರಣಾದ ವ್ಯಾಪಾರಿಯಾಗಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ರಾಜ್ಯ ವಿದ್ಯುತ್ ಪ್ರಸರಣಾ ಸಂಸ್ಥೆ (ಎಂಎಸ್ಇಡಿಸಿಎಲ್)ಯಿಂದ 55,519 ಯುನಿಟ್ ಬಳಕೆ ಮಾಡಿದ್ದಕ್ಕಾಗಿ, ವ್ಯಾಪಾರಿಗೆ ರೂ.8,64,781 ಮೊತ್ತದ ಬಿಲ್ ಕಳುಹಿಸಿತ್ತು. ಇದರಿಂತ ತೀವ್ರವಾಗಿ ಆಘಾತಗೊಂಡ ವ್ಯಾಪಾರಿ ಹಲವು ಬಾರಿ ಸ್ಥಳೀಯ ಕಚೇರಿಗೆ ಭೇಟಿ ಮೀಟರ್'ನಲ್ಲಿ ಸಮಸ್ಯೆಯಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಇದಕ್ಕೆ ಅಧಿಕಾರಿಗಳು ಯಾವುದೇ ರೀತಿಯ ಸ್ಪಂದನೆಯನ್ನು ನೀಡಿಲ್ಲ. ಇದರಿಂದ ತೀವ್ರವಾಗಿ ಬೇಸತ್ತ ಜಗನ್ನಾಥ್ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, 6,117.8 ಕೆಡಬ್ಲ್ಯೂಹೆಚ್ ಬದಲಿಗೆ 61, 1478 ಕೆಡಬ್ಲ್ಯೂಹೆಚ್ ಮೀಟರ್ ರೀಡಿಂಗ್ ಪಂಚ್ ಮಾಡಲಾಗಿತ್ತು. ಪರಿಣಾಮ ಶೆಲ್ಕೆಯವರಿಗೆ ಏಪ್ರಿಲ್ ಕೊನೆಯ ವಾರದಲ್ಲಿ ರೂ.8.64 ಲಕ್ಷ ವಿದ್ಯುತ್ ನೀಡಲಾಗಿತೆ. ಶೆಲ್ಕೆಯವರ ವಿದ್ಯುತ್ ಮೀಟರ್ ಅನ್ನು ಪ್ರಸಕ್ತ ವರ್ಷ ಜನವರಿ 10 ರಂದು ಬದಲಾಯಿಸಲಾಗಿತ್ತು. ಮೀಟರ್ ದೋಷಯುಕ್ತವಾಗಿದ್ದರಿಂದಾಗಿ ಈ ರೀತಿಯ ನಡೆದಿಬಹುದು ಎಂದು ಹೇಳಿದ್ದಾರೆ.
ಸಾವಿವೂ ಮುನ್ನ ಜಗನ್ನಾಥ್ ಅವರು ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮ ಸಾವಿಗೆ ದೊಡ್ಡ ಮೊತ್ತದ ಬಿಲ್ ಕಾರಣ ಎಂದು ಹೇಳಿಕೊಂಡಿದ್ದಾರೆ. ಪ್ರತೀ ತಿಂಗಳು ನಮಗೆ ರೂ.1,000ದಷ್ಟು ವಿದ್ಯುತ್ ಬಿಲ್ ಬರುತ್ತಿತ್ತು ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ