ಲೋಕಮಾನ್ಯ ತಿಲಕ್ 
ದೇಶ

ಲೋಕಮಾನ್ಯ ತಿಲಕ್ ಭಯೋತ್ಪಾದನೆಯ ಜನಕ: ವಿವಾದದಕ್ಕೆ ಕಾರಣವಾಯ್ತು ರಾಜಸ್ಥಾನದ 8 ನೇ ತರಗತಿ ಪಠ್ಯ

ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರನಾಥ ತಿಲಕ್ ಭಯೋತ್ಪಾದನೆಯ ಜನಕ ಎಂದು ರಾಜಸ್ಥಾನದ 8 ನೇ ತರಗತಿ ಪಠ್ಯದಲ್ಲಿ ಬರೆಯಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಜ್ಮೀರ್: ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರನಾಥ ತಿಲಕ್ ಭಯೋತ್ಪಾದನೆಯ ಜನಕ ಎಂದು ರಾಜಸ್ಥಾನದ 8 ನೇ ತರಗತಿ ಪಠ್ಯದಲ್ಲಿ ಬರೆಯಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. 
8 ನೇ ತರಗತಿಯ ಸಮಾಜ ವಿಜ್ಞಾನದ ಪಠ್ಯದ 22 ನೇ ಅಧ್ಯಾಯದ 18 ಹಾಗೂ 19 ನೇ ಶತಮಾನದಲ್ಲಿ ನಡೆದ ರಾಷ್ಟ್ರೀಯ ಚಳಿವಳಿಯ ಘಟನೆಗಳೆಂಬ ವಿಷಯದಲ್ಲಿ ಬಾಲಗಂಗಾಧರನಾಥ ತಿಲಕ್ ಅವರನ್ನು ಭಯೋತ್ಪಾದನೆಯ ಜನಕ ಎಂದು ಉಲ್ಲೇಖಿಸಲಾಗಿದೆ. 
ಬಾಲಗಂಗಾಧರನಾಥ ತಿಲಕ್ ಅವರು ರಾಷ್ಟ್ರೀಯ ಚಳುವಳಿಗೆ ಮಾರ್ಗದರ್ಶನ ನೀಡಿದವರು ಹಾಗಾಗಿ ಅವರನ್ನು ಭಯೋತ್ಪಾದನೆಯ ಜನಕ ಎಂದು ಕರೆಯಲಾಗುತ್ತದೆ ಎಂದು ಪುಸ್ತಕದಲ್ಲಿ ಬರೆಯಲಾಗಿದೆ. 
ಮಥುರಾ ಮೂಲದ ಪ್ರಿಂಟರ್ ನಿಂದ ಪುಸ್ತಕ ಮುದ್ರಣಗೊಂಡಿದ್ದು, ಆಂಗ್ಲ ಮಾಧ್ಯಮಿಕ ಶಾಲೆಗಳಲ್ಲಿ ಈ ಪುಸ್ತಕವನ್ನು ಬೋಧಿಸಲು ಬಳಕೆ ಮಾಡಲಾಗುತ್ತಿದೆ.  ತಿಲಕರು ದೇಶದಲ್ಲಿ ವಿನೂತನವಾದ ಜಾಗೃತಿ ಮೂಡಿಸಿದರು. ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು, ಇದು ಬ್ರಿಟೀಷರ ಕೆಂಗಣ್ಣಿಗೆ ಗುರಿಯಾಯಿತು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT