ಲೋಕಮಾನ್ಯ ತಿಲಕ್ 
ದೇಶ

ಲೋಕಮಾನ್ಯ ತಿಲಕ್ ಭಯೋತ್ಪಾದನೆಯ ಜನಕ: ವಿವಾದದಕ್ಕೆ ಕಾರಣವಾಯ್ತು ರಾಜಸ್ಥಾನದ 8 ನೇ ತರಗತಿ ಪಠ್ಯ

ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರನಾಥ ತಿಲಕ್ ಭಯೋತ್ಪಾದನೆಯ ಜನಕ ಎಂದು ರಾಜಸ್ಥಾನದ 8 ನೇ ತರಗತಿ ಪಠ್ಯದಲ್ಲಿ ಬರೆಯಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಜ್ಮೀರ್: ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರನಾಥ ತಿಲಕ್ ಭಯೋತ್ಪಾದನೆಯ ಜನಕ ಎಂದು ರಾಜಸ್ಥಾನದ 8 ನೇ ತರಗತಿ ಪಠ್ಯದಲ್ಲಿ ಬರೆಯಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. 
8 ನೇ ತರಗತಿಯ ಸಮಾಜ ವಿಜ್ಞಾನದ ಪಠ್ಯದ 22 ನೇ ಅಧ್ಯಾಯದ 18 ಹಾಗೂ 19 ನೇ ಶತಮಾನದಲ್ಲಿ ನಡೆದ ರಾಷ್ಟ್ರೀಯ ಚಳಿವಳಿಯ ಘಟನೆಗಳೆಂಬ ವಿಷಯದಲ್ಲಿ ಬಾಲಗಂಗಾಧರನಾಥ ತಿಲಕ್ ಅವರನ್ನು ಭಯೋತ್ಪಾದನೆಯ ಜನಕ ಎಂದು ಉಲ್ಲೇಖಿಸಲಾಗಿದೆ. 
ಬಾಲಗಂಗಾಧರನಾಥ ತಿಲಕ್ ಅವರು ರಾಷ್ಟ್ರೀಯ ಚಳುವಳಿಗೆ ಮಾರ್ಗದರ್ಶನ ನೀಡಿದವರು ಹಾಗಾಗಿ ಅವರನ್ನು ಭಯೋತ್ಪಾದನೆಯ ಜನಕ ಎಂದು ಕರೆಯಲಾಗುತ್ತದೆ ಎಂದು ಪುಸ್ತಕದಲ್ಲಿ ಬರೆಯಲಾಗಿದೆ. 
ಮಥುರಾ ಮೂಲದ ಪ್ರಿಂಟರ್ ನಿಂದ ಪುಸ್ತಕ ಮುದ್ರಣಗೊಂಡಿದ್ದು, ಆಂಗ್ಲ ಮಾಧ್ಯಮಿಕ ಶಾಲೆಗಳಲ್ಲಿ ಈ ಪುಸ್ತಕವನ್ನು ಬೋಧಿಸಲು ಬಳಕೆ ಮಾಡಲಾಗುತ್ತಿದೆ.  ತಿಲಕರು ದೇಶದಲ್ಲಿ ವಿನೂತನವಾದ ಜಾಗೃತಿ ಮೂಡಿಸಿದರು. ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು, ಇದು ಬ್ರಿಟೀಷರ ಕೆಂಗಣ್ಣಿಗೆ ಗುರಿಯಾಯಿತು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT