ಸಂಗ್ರಹ ಚಿತ್ರ 
ದೇಶ

ಲಾಲು ಪುತ್ರನ ಮದುವೆ ಮುಗಿಸಿ ಹಿಂತಿರುಗುವಾಗ ಅಪಘಾತ: 3 ಆರ್‌ಜೆಡಿ ನಾಯಕರ ಸಾವು

ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಮದುವೆ ಮುಗಿಸಿಕೊಂಡು...

ಅರಾರಿಯ(ಬಿಹಾರ): ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಮದುವೆ ಮುಗಿಸಿಕೊಂಡು ಹಿಂತಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಜೆಡಿ ನಾಯಕರು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಸಂಭವಿಸಿದೆ. 
ಬಿಹಾರದ ಅರಾರಿಯಾ ಜಿಲ್ಲೆ ಸಮೀಪ ಕೃಷ್ಣಗಂಜ್-ಪಾಟ್ನಾ ರಸ್ತೆಯಲ್ಲಿ ಆರ್ಜೆಡಿ ನಾಯಕರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು ನಂತರ ಎದುರಿನಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡಿದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. 
ಮೃತರನ್ನು ಆರ್‌ಜೆಡಿ ನಾಯಕ ಇಕ್ರಾಮುಲ್ ಹಾಕ್ ಬಾಗಿ, ಮಾಜಿ ಸಚಿವರೊಬ್ಬರ ಮಗ, ಕೃಷ್ಣಗಂಜ್ ಜಿಲ್ಲಾಧ್ಯಕ್ಷ ಇಂತೆಕಾಬ್ ಅಲಾಮ್, ದಿಘಾಲ್ ಗಂಜ್ ಬ್ಲಾಕ್ ಅಧ್ಯಕ್ಷ ಪಪ್ಪು ಮತ್ತು ಚಾಲಕ ಸಾಹಿಲ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT