ಉಮ್ಮನ್ ಚಾಂಡಿ 
ದೇಶ

ಸೋಲಾರ್ ಹಗರಣದಿಂದ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಮುಕ್ತಿ

ಸೋಲಾರ್ ಹಗರಣದಲ್ಲಿ ಕೇರಳ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಗೆ ಮುಕ್ತಿ ನೀಡಿದೆ...

ಕೊಚ್ಚಿ: ಸೋಲಾರ್ ಹಗರಣದಲ್ಲಿ ಕೇರಳ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಗೆ ಮುಕ್ತಿ ನೀಡಿದೆ.

ಉಮ್ಮನ್ ಚಾಂಡಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಸೌರ ತನಿಖೆ ಆಯೋಗ ನಡೆಸಿರುವ ವಿಚಾರಣೆಗಳು ಮತ್ತು ಹೇಳಿಕೆಗಳನ್ನು ಕೇರಳ ಹೈಕೋರ್ಟ್ ಇಂದು ವಜಾ ಮಾಡಿದೆ.

ಸೌರ ತನಿಖೆ ಆಯೋಗದ ವರದಿಯನ್ನು ಅಸಿಂಧುಗೊಳಿಸುವಂತೆ ಉಮ್ಮನ್ ಚಾಂಡಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿ ನ್ಯಾಯಾಲಯ ಈ ಆದೇಶ ನೀಡಿದೆ. ಆದರೆ ಆಯೋಗದ ವರದಿಯನ್ನು ತಿರಸ್ಕರಿಸುವಂತೆ ಮಾಜಿ ಸಚಿವ ತಿರುವಂಚೂರು ರಾಧಾಕೃಷ್ಣನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು.

2013ರ ಜುಲೈ 19ರಂದು ಸರಿತಾ ನಾಯರ್ ಬರೆದ ಪತ್ರಕ್ಕೆ ಮಾಡಿರುವ ಉಲ್ಲೇಖಗಳು, ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಮರು ಹೇಳಿಕೆಗಳು, ಅವಲೋಕನಗಳು, ಸಲಹೆ ಮತ್ತು ಶಿಫಾರಸ್ಸುಗಳನ್ನು ನೋಡಿದಾಗ ಆಯೋಗದ ವರದಿಯನ್ನು ತಿರಸ್ಕರಿಸಬಹುದು ಎಂದು ತಿಳಿದುಬಂದಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಇಂದು ಹೇಳಿದೆ.

ಈ ಆದೇಶದ ಮೂಲಕ ರಾಜ್ಯ ಸರ್ಕಾರ ಸರಿತಾ ನಾಯರ್ ಅವರ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಉಮ್ಮನ್ ಚಾಂಡಿ ವಿರುದ್ಧ ಮೇಲಿನ ನ್ಯಾಯಾಲಯಕ್ಕೆ ದೂರು ನೀಡಲು ಸಾಧ್ಯವಿಲ್ಲದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?