ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ 
ದೇಶ

ರೆಸಾರ್ಟ್ ರಾಜಕಾರಣದ ಸುಳಿವು: ಕರ್ನಾಟಕ ಶಾಸಕರಿಗೆ ಕೇರಳ ಪ್ರವಾಸೋದ್ಯಮ ಇಲಾಖೆ ಆಹ್ವಾನ!

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಸರ್ಕಾರ ರಚನೆ ಮಾಡುವುದಕ್ಕೆ ಯಾವ ಪಕ್ಷಕ್ಕೂ ಬಹುಮತವಿಲ್ಲದೇ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ.

ತಿರುವನಂತಪುರಂ: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಸರ್ಕಾರ ರಚನೆ ಮಾಡುವುದಕ್ಕೆ ಯಾವ ಪಕ್ಷಕ್ಕೂ ಬಹುಮತವಿಲ್ಲದೇ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. 
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ 2008 ರಲ್ಲಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಶಾಸಕರ ಕೊರತೆ ಎದುರಾದಾಗ ರಾಜ್ಯ ರಾಜಕಾರಣದಲ್ಲಿ ರೆಸಾರ್ಟ್ ರಾಜಕಾರಣದ ಕಾರಣಕ್ಕೆ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಚುನಾವಣೆಯಲ್ಲಿಯೂ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು ಈಗಲೂ ರೆಸಾರ್ಟ್ ರಾಜಕಾರಣದ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆ ಕರ್ನಾಟಕದ ಶಾಸಕರಿಗೆ ಕೇರಳಕ್ಕೆ ಬರುವಂತೆ ಆಹ್ವಾನ ನೀಡಿದೆ. 
"ನಾವು ಕರ್ನಾಟಕದ ಶಾಸಕರಿಗೆ ದೇವರ ನಾಡಿನ ರೆಸಾರ್ಟ್ ಗಳಿಗೆ ಭೇಟಿ ನೀಡುವಂತೆ ಆಹ್ವಾನ ನೀಡುತ್ತೇವೆ" ಎಂದು ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ ಮಾಡಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT