ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ 
ದೇಶ

ರೆಸಾರ್ಟ್ ರಾಜಕಾರಣದ ಸುಳಿವು: ಕರ್ನಾಟಕ ಶಾಸಕರಿಗೆ ಕೇರಳ ಪ್ರವಾಸೋದ್ಯಮ ಇಲಾಖೆ ಆಹ್ವಾನ!

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಸರ್ಕಾರ ರಚನೆ ಮಾಡುವುದಕ್ಕೆ ಯಾವ ಪಕ್ಷಕ್ಕೂ ಬಹುಮತವಿಲ್ಲದೇ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ.

ತಿರುವನಂತಪುರಂ: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಸರ್ಕಾರ ರಚನೆ ಮಾಡುವುದಕ್ಕೆ ಯಾವ ಪಕ್ಷಕ್ಕೂ ಬಹುಮತವಿಲ್ಲದೇ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. 
ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ 2008 ರಲ್ಲಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಶಾಸಕರ ಕೊರತೆ ಎದುರಾದಾಗ ರಾಜ್ಯ ರಾಜಕಾರಣದಲ್ಲಿ ರೆಸಾರ್ಟ್ ರಾಜಕಾರಣದ ಕಾರಣಕ್ಕೆ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಚುನಾವಣೆಯಲ್ಲಿಯೂ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು ಈಗಲೂ ರೆಸಾರ್ಟ್ ರಾಜಕಾರಣದ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಕೇರಳ ಪ್ರವಾಸೋದ್ಯಮ ಇಲಾಖೆ ಕರ್ನಾಟಕದ ಶಾಸಕರಿಗೆ ಕೇರಳಕ್ಕೆ ಬರುವಂತೆ ಆಹ್ವಾನ ನೀಡಿದೆ. 
"ನಾವು ಕರ್ನಾಟಕದ ಶಾಸಕರಿಗೆ ದೇವರ ನಾಡಿನ ರೆಸಾರ್ಟ್ ಗಳಿಗೆ ಭೇಟಿ ನೀಡುವಂತೆ ಆಹ್ವಾನ ನೀಡುತ್ತೇವೆ" ಎಂದು ಕೇರಳ ಪ್ರವಾಸೋದ್ಯಮ ಇಲಾಖೆ ಟ್ವೀಟ್ ಮಾಡಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT