ಸಂತೋಷ್ ಹೆಗಡೆ 
ದೇಶ

ಕೂಡಲೇ ಅಧಿವೇಶನ ಕರೆಯಿರಿ, ಕುದುರೆ ವ್ಯಾಪಾರಕ್ಕೆ ಅವಕಾಶ ಕೊಡಬೇಡಿ: ರಾಜ್ಯಪಾಲರಿಗೆ ಸಂತೋಷ್ ಹೆಗಡೆ

ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕೂಡಲೇ ವಿಧಾನಸಭೆ ಅಧಿವೇಶನ ಕರೆದು ರಾಜಕೀಯ ಪಕ್ಷಗಳಿಗೆ...

ಹೈದರಾಬಾದ್: ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕೂಡಲೇ ವಿಧಾನಸಭೆ ಅಧಿವೇಶನ ಕರೆದು ರಾಜಕೀಯ ಪಕ್ಷಗಳಿಗೆ ಬಹುಮತ ಸಾಬೀತುಪಡಿಸಲು ಸೂಚಿಸಬೇಕು. ವಿಳಂಬ ಮಾಡಿದರೆ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಬುಧವಾರ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಂದಿಲ್ಲ. ಆದರೂ ವಾಮ ಮಾರ್ಗದ ಮೂಲಕ ಸರ್ಕಾರ ರಚಿಸಲು ರಾಜಕೀಯ ಪಕ್ಷಗಳು ಸರ್ಕಸ್ ನಡೆಸುತ್ತಿರುವುದು ಸರಿಯಲ್ಲ ಎಂದು ಸಂತೋಷ್ ಹೆಗಡೆ ಅವರು ಪಿಟಿಐಗೆ ತಿಳಿಸಿದ್ದಾರೆ.
ರಾಜ್ಯಪಾಲರು ಕೂಡಲೇ ಅಧಿವೇಶನ ಕರೆದು ಬಹುಮತ ಸಾಬೀತಿಗೆ ಸೂಚಿಸಬೇಕು ಎಂದು ಮಾಜಿ ಲೋಕಾಯುಕ್ತರು ಹೇಳಿದ್ದಾರೆ.
ರಾಜ್ಯದಲ್ಲೂ ಗೋವಾ ಮತ್ತು ಮಣಿಪುರದಲ್ಲಿ ಆದಂತೆ ಆಗಬಾರದು. ಬಹುಮತ ಹೊಂದಿರುವ ರಾಜಕೀಯ ಪಕ್ಷ ಅಥವಾ ಪಕ್ಷಗಳ ಗುಂಪಿಗೆ ಮೊದಲು ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT