ಸಾಂದರ್ಭಿಕ ಚಿತ್ರ 
ದೇಶ

2001ರ ಕೇರಳ ಮರ್ಯಾದೆ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಯುವ ಕಾಂಗ್ರೆಸ್ ನಾಯಕನನ್ನ....

ಕೊಚ್ಚಿ: ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಯುವ ಕಾಂಗ್ರೆಸ್ ನಾಯಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಚ್ಚಿಯ ಸಿಬಿಐ ವಿಶೇಷ ಕೋರ್ಟ್ ಇಬ್ಬರು ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಅಲ್ಲದೆ ತಲಾ ಒಂದು ಲಕ್ಷ ರುಪಾಯಿ ದಂಡ ವಿಧಿಸಿದೆ.
2001ರಲ್ಲಿ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದ ಯುವ ಕಾಂಗ್ರೆಸ್ ಬಾಲಕೃಷ್ಣನ್ ಅವರನ್ನು ಹತ್ಯೆ ಮಾಡಲಾಗಿತ್ತು. 
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶ ಎಸ್ ಸಂತೋಷ್ ಕುಮಾರ್ ಅವರು, ಅಪರಾಧಿಗಳಾದ ಮೊಹಮ್ಮದ್ ಇಖ್ಬಾಲ್ ಅಲಿಯಾಸ್ ಇಕ್ಕು, ಹಾಗೂ ಮೊಹಮ್ಮದ್ ಹನೀಫ್ ಅಲಿಯಾಸ್ ಜ್ಯಾಕಿ ಹನೀಫ್ ಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಮತ್ತು ಇತರೆ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ದಂಡದ ಹಣವನ್ನು ಬಾಲಕೃಷ್ಣನ್ ಅವರ ತಂದೆ ಗೋಪಾಲನ್ ಅವರಿಗೆ ನೀಡಬೇಕು ಎಂದು ಸಿಬಿಐ ಕೋರ್ಟ್ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT