ರಂಜಾನ್ ನಿಮಿತ್ತ ಕದನ ವಿರಾಮ ಇದ್ದರೂ ಪಾಕ್ ನನ್ನ ಪತಿಯನ್ನು ಕೊಂದು ಹಾಕಿದೆ: ಹುತಾತ್ಮ ಯೋಧನ ಪತ್ನಿ 
ದೇಶ

ರಂಜಾನ್ ನಿಮಿತ್ತ ಕದನ ವಿರಾಮ ಇದ್ದರೂ ಪಾಕ್ ನನ್ನ ಪತಿಯನ್ನು ಕೊಂದು ಹಾಕಿದೆ: ಹುತಾತ್ಮ ಯೋಧನ ಪತ್ನಿ

ರಂಜಾನ್ ಸಂದರ್ಭದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆ ನಡೆದಂತೆ ಸೇನೆಗೆ ಭಾರತ ಸೂಚನೆ ನೀಡಿತ್ತು. ಕದನ ವಿರಾಮ ಇದ್ದರೂ ಪಾಕಿಸ್ತಾನ ತನ್ನ ಉದ್ಧಟತನದ ಮೂಲಕ ನನ್ನ ಪತಿಯನ್ನು ಕೊಂದು ಹಾಕಿದೆ ಎಂದು ದುಃಖತಪ್ತ ಹುತಾತ್ಮ...

ನವದೆಹಲಿ: ರಂಜಾನ್ ಸಂದರ್ಭದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆ ನಡೆದಂತೆ ಸೇನೆಗೆ ಭಾರತ ಸೂಚನೆ ನೀಡಿತ್ತು. ಕದನ ವಿರಾಮ ಇದ್ದರೂ ಪಾಕಿಸ್ತಾನ ತನ್ನ ಉದ್ಧಟತನದ ಮೂಲಕ ನನ್ನ ಪತಿಯನ್ನು ಕೊಂದು ಹಾಕಿದೆ ಎಂದು ದುಃಖತಪ್ತ ಹುತಾತ್ಮ ವೀರ ಯೋಧ ಸೀತಾರಾಮ್ ಉಪಾಧ್ಯಾಯ ಅವರ ಪತ್ನಿ ಹೇಳಿದ್ದಾರೆ. 
ನನ್ನ ಪತಿಯನ್ನು ಪಾಕಿಸ್ತಾನ ಹತ್ಯೆ ಮಾಡಿದೆ. ಇದೀಗ ಸರ್ಕಾರ ಪರಿಹಾರ ನೀಡುವುದರಿಂದ ಏನಾಗುತ್ತದೆ? ನನ್ನ ಪತಿಯನ್ನು ಹಿಂದಕ್ಕೆ ಕರೆತರಲು ಸಾಧ್ಯವಿಲ್ಲವಲ್ಲ ಯೋಧನ ಪತ್ನಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಯೋಧ ಸೀತಾರಾಮ್ ಉಪಾಧ್ಯಾಯ ಅವರು ಹುತಾತ್ಮರಾಗಿದ್ದರು. 
ಕೆಲ ದಿನಗಳ ಹಿಂದಷ್ಟೇ ಅಧಿಕೃತ ಪ್ರಕಟನೆಯೊಂದನ್ನು ನೀಡಿದ್ದ ಕೇಂದ್ರ ಗೃಹ ಇಲಾಖೆ, ರಂಜಾನ್ ತಿಂಗಳಲ್ಲಿ ಭಾರತೀಯ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆಗಳನ್ನು ನಡೆಸುವುದಿಲ್ಲ. ಯಾರಾದರೂ ದಾಳಿ ನಡೆಸಿದರೆ ಮರು ದಾಳಿ ನಡೆಸಲು ಸೇನೆಗೆ ಅವಕಾಶವಿದೆ ಎಂದು ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT