ದೇಶ

ಸುಪ್ರೀಂ ಆದೇಶ ಸಾಂವಿಧಾನಿಕ ನೈತಿಕತೆ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಿದೆ: ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್

Manjula VN
ನವದೆಹಲಿ: ಸುಪ್ರೀಂಕೋರ್ಟ್ ಆದೇಶ ಸಾಂವಿಧಾನಿಕ ನೈತಿಕತೆ ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಂತಾಗಿದೆ ಎಂದು ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. 
ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸರ್ಕಾರ ನಾಳೆ(ಶನಿವಾರ) ಸಂಜೆ ನಾಲ್ಕು ಗಂಟೆಗೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್​ ಮಹತ್ವದ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವನಿ ಕುಮಾರ್ ಅವರು, ನ್ಯಾಯಾಲಯದ ಆದೇಶವನ್ನು ಸಂಭ್ರಮಿಸಬೇಕು. ಬುದ್ಧಿವಂತಿಕೆಯಿಂದ ಸುಪ್ರೀಂಕೋರ್ಟ್ ಜನರ ನಂಬಿಕೆಯನ್ನು ಗಟ್ಟಿಯಾಗುವಂತೆ ಮಾಡಿದೆ. ಅಧಿಕಾರ ಪಡೆದುಕೊಳ್ಳಲೇಬೇಕೆಂದು ಬಯಸುತ್ತಿರುವ ಪಕ್ಷಕ್ಕಿದು ಭಾರೀ ಹಿನ್ನಡೆ ಎಂದು ತಿಳಿಸಿದ್ದಾರೆ. 
SCROLL FOR NEXT