ಕಾರ್ತಿ ಚಿದಂಬರಂ 
ದೇಶ

ಕಾರ್ತಿ ಚಿದಂಬರಂ ವಿದೇಶ ಪ್ರವಾಸಕ್ಕೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಒಪ್ಪಿಗೆ

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರು ಕೆಲವು ನಿಬಂಧನೆಗೆ ಒಳಪಟ್ಟು ವಿದೇಶಕ್ಕೆ ತೆರಳಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರು ಕೆಲವು ನಿಬಂಧನೆಗೆ ಒಳಪಟ್ಟು ವಿದೇಶಕ್ಕೆ ತೆರಳಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.
ಕಾರ್ತಿ ಚಿದಂಬರಂ ಯುಕೆ, ಜರ್ಮನಿ ಹಾಗೂ ಸ್ಪೇನ್ ದೇಶಕ್ಕೆ ಮೇ 19 ರಿಂದ 27 ರ ನಡುವೆ ಪ್ರಯಾಣಿಸಲು ಅಡ್ಡಿ ಇಲ್ಲ ಆದರೆ ಕಾರ್ತಿ ಯಾವುದೇ ವಿದೇಶಿ ಬ್ಯಾಂಕ್ ಖಾತೆಯನ್ನು ತೆರೆಯಲು ಅಥವಾ ಮುಚ್ಚಲು ಅನುಮತಿ ಇಲ್ಲ. ವಿದೇಶದಲ್ಲಿ ಯಾವುದೇ ಆಸ್ತಿ ವ್ಯವಹಾರಕ್ಕೆ ಕೈ ಹಾಕುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ.
ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಕಾರ್ತಿ ಚಿದಂಬರಂ ಮೇಲೆ ಅನೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸುತ್ತಿದೆ. ಐಎನ್ಎಕ್ಸ್ ಮೀಡಿಯಾ, ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪಗಳೂ  ಇದರಲ್ಲಿ ಸೇರಿದೆ.
ಕಾರ್ತಿ ವಿದೇಶ ಪ್ರವಾಸಕ್ಕೆ ತೆರಳುವದಕ್ಕೆ ಅಡ್ಡಿ ಇಲ್ಲ ಆದರೆ ಅವರು ನ್ಯಾಯಾಲಯದ ಆದೇಶ, ನಿರ್ಬಂಧಗಳನ್ನು ಮೀರುವಂತಿಲ್ಲ. ಅವರು ಭಾರತಕ್ಕೆ ಹಿಂತಿರುಗುವ ದಿನಾಂಕ ಹಾಗೂ ವಿಮಾನ ಪ್ರಯಾಣದ ವಿವರಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕಿದೆ.
ಕಾರ್ತಿ ಇಡಿ ತನಿಖೆಗೆ ಸಹಕರಿಸಬೇಕು. ಭಾರತಕ್ಕೆ ಹಿಂತಿರುಗಿದ ಬಳಿಕ ಅವರು ತಮ್ಮ ಪಾಸ್ ಪೋರ್ಟ್ ನ್ನು ಇಡಿ ವಶಕ್ಕೆ ನಿಡಬೇಕು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT