ಚೆನ್ನೈಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಟಿಟಿಡಿ ಪ್ರಧಾನ ಅರ್ಚಕ ಎವಿ ರಮಣ ದೀಕ್ಷಿತರು 
ದೇಶ

ತಿರುಪತಿ ದೇವಾಲಯದ ಪ್ರಧಾನ ಅರ್ಚಕ ಎವಿ ರಮಣ ದೀಕ್ಷಿತರಿಗೆ ಹುದ್ದೆಯಿಂದ ಕೆಳಗಿಳಿಯಲು ಟಿಟಿಡಿ ಸೂಚನೆ

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪರಂಪರಾಗತವಾಗಿ ಇರುವ ಅಲ್ಲಿನ ಪ್ರಧಾನ ಅರ್ಚಕರಾದ ರಮಣ ...

ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪರಂಪರಾಗತವಾಗಿ ಇರುವ ಅಲ್ಲಿನ ಪ್ರಧಾನ ಅರ್ಚಕರಾದ ರಮಣ ದೀಕ್ಷಿತರು ಮತ್ತು ಇತರ ಮೂವರು ಮುಖ್ಯ ಅರ್ಚಕರಾದ ಶ್ರೀನಿವಾಸ ದೀಕ್ಷಿತರು, ನಾರಾಯಣ ದೀಕ್ಷಿತರು ಮತ್ತು ನರಸಿಂಹ ದೀಕ್ಷಿತರು ಅವರಿಗೆ ನಿವೃತ್ತಿಯ ಆದೇಶ ನೀಡಲಾಗಿದೆ. ಮತ್ತು ತಕ್ಷಣದಿಂದಲೇ ದೇವಾಲಯದ ಪೂಜಾ ವಿಧಿ ವಿಧಾನಗಳಲ್ಲಿ ಭಾಗವಹಿಸದಂತೆ ಸೂಚಿಸಲಾಗಿದೆ.

ಕಳೆದ ಮಧ್ಯರಾತ್ರಿ 12 ಗಂಟೆಗೆ ಅರ್ಚಕರಿಗೆ ಈ ಆದೇಶವನ್ನು ಹಸ್ತಾಂತರಿಸಲಾಗಿದ್ದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟಿಗಳಮಂಡಳಿಯ(ಟಿಟಿಡಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಆದೇಶ ನೀಡಲಾಗಿದೆ ಎಂದು ಹೇಳಿದರು.

ದೇವಸ್ಥಾನದಲ್ಲಿ ಪೂಜೆ ಮಾಡುವ ಅರ್ಚಕರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ನಿಗದಿಪಡಿಸಬೇಕೆಂದು ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ನಿರ್ಧರಿಸಿದ್ದು, ಈ ಬಗ್ಗೆ ಕಾನೂನು ಸಲಹೆಯನ್ನು ಕೇಳಿದೆ. ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಮುಖ್ಯಮಂತ್ರಿ ಕಚೇರಿ ಮತ್ತು ಸಶಕ್ತೀಕರಣ ಇಲಾಖೆಯ ಆದೇಶದಂತೆ ಕಳೆದ ರಾತ್ರಿ ಟಿಟಿಡಿ ಅಧಿಕಾರಿಗಳು ಸಭೆ ನಡೆಸಿ ಟಿಟಿಡಿ ಮಂಡಳಿಯ ನಿರ್ಧಾರವನ್ನು ಜಾರಿಗೆ ತರಬೇಕೆಂದು ಮತ್ತು ನಾಲ್ವರು ಮುಖ್ಯ ಅರ್ಚಕರಿಗೆ 65 ವರ್ಷ ನಿವೃತ್ತಿ ವಯಸ್ಸನ್ನು ನಿಗದಿಪಡಿಸಬೇಕೆಂದು ಆದೇಶ ತರುವಂತೆ ಕೋರಲು ನಿರ್ಧಾರ ತೆಗೆದುಕೊಂಡಿತ್ತು.

ಇಂದು ಬೆಳಗ್ಗೆ ದೇವಸ್ಥಾನದ ಪೂಜಾ ವಿಧಿ ವಿಧಾನ ನಡೆಸಬೇಕಾಗಿದ್ದ ಪ್ರಧಾನ ಅರ್ಚಕ ಎವಿ ರಮಣ ದೀಕ್ಷಿತರು ಟಿಟಿಡಿಯ ಆದೇಶದಂತೆ ದೇವಸ್ಥಾನದಲ್ಲಿ ಕರ್ತವ್ಯಕ್ಕೆ ಬರಲಿಲ್ಲ. ಧಾರ್ಮಿಕ ವಿಧಿ ವಿಧಾನಗಳನ್ನು ಬೇರೆ ಅರ್ಚಕರು ನೆರವೇರಿಸಿದರು. ಈ ಮಧ್ಯೆ ಟಿಟಿಡಿ ವೇಣುಗೋಪಾಲ್ ದೀಕ್ಷಿತರು ಅವರನ್ನು ನೂತನ ಮುಖ್ಯ ಅರ್ಚಕರನ್ನಾಗಿ ನೇಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!