ಉದ್ಧವ್ ಠಾಕ್ರೆ 
ದೇಶ

ಚುನಾವಣೆ ಏಕೆ ಬೇಕು? ಕೇಂದ್ರವೇ ಸಿಎಂಗಳನ್ನೂ ನೇಮಕ ಮಾಡಲಿ: ಉದ್ಧವ್ ಠಾಕ್ರೆ

"ಮುಇಂದೊಂದು ದಿನ ಕೇಂದ್ರ ಸರ್ಕಾರ ತಾನು ರಾಜ್ಯಪಾಲರನ್ನು ನೇಮಕ ಮಾಡುವಂತೆಯೇ ಆಯಾ ರಾಜ್ಯದ ಮುಖ್ಯಮಂತ್ರಿಗಳನ್ನೂ ನೇಮಿಸಬಹುದು" ಶಿವಸೇನಾ ಮುಖ್ಯಸ್ಥ ಉದ್ಭವ್ ಠಾಕ್ರೆ ಹೇಳಿದ್ದಾ

ಮುಂಬೈ: "ಮುಇಂದೊಂದು ದಿನ ಕೇಂದ್ರ ಸರ್ಕಾರ ತಾನು ರಾಜ್ಯಪಾಲರನ್ನು ನೇಮಕ ಮಾಡುವಂತೆಯೇ ಆಯಾ ರಾಜ್ಯದ ಮುಖ್ಯಮಂತ್ರಿಗಳನ್ನೂ ನೇಮಿಸಬಹುದು" ಶಿವಸೇನಾ ಮುಖ್ಯಸ್ಥ ಉದ್ಭವ್ ಠಾಕ್ರೆ ಹೇಳಿದ್ದಾರೆ. 
ಕರ್ನಾಟಕದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ಈ ಮಾತನ್ನು ಹೇಳಿದ್ದು ಭಾರತೀಯ ಜನತಾ ಪಕ್ಷದಿಂದಾಗಿ "ಪ್ರಜಾಪ್ರಭುತ್ವವು ಅವಮಾನಕ್ಕೊಳಗಾಗುತ್ತಿದೆ" ಎಂದರು.
"ಪ್ರಜಾಪ್ರಭುತ್ವವನ್ನೇ ಅವಮಾನಿಸುವಂತಾದ ಮೇಲೆ ಪ್ರಜಾಪ್ರಭುತ್ವ ರಾಷ್ಟ್ರವೆಂದು ಕರೆಯುವ ಔಚಿತ್ಯವೇನು? ಚುನಾವಣೆಗಳನ್ನೆಲ್ಲಾ ನಿಲ್ಲಿಸಿಬಿಡಿ ಆಗ ಪ್ರಧಾನಿ ಮೋದಿ ತಾವು ಯಾವ ತೊಂದರೆ ಇಲ್ಲದೆ ವಿದೇಶ ಯಾತ್ರೆ ಮಾಡಬಹುದು"  ಮುಂಬೈ ಸಮೀಪದ ಉಲ್ಲಾಸನಗರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾತನಾಡಿದ ಠಾಕ್ರೆ ಹೇಳಿದ್ದಾರೆ.
"ಚುನಾವಣೆ ನಡೆಸುವುದನ್ನೇ ನಿಲ್ಲಿಸಿ, ಆಗ ಹಣ ಹಾಗೂ ಸಮಯ ಉಳಿತಾಯವಾಗುತ್ತದೆ. ಆಯಾ ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡುವಂತೆಯೇ ಮುಖ್ಯಮಂತ್ರಿಗಳನ್ನೂ ನೇಮಕ ಮಾಡಿರಿ.
ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಬಿಜೆಪಿಗೆ ರಾಜ್ಯದಲ್ಲಿ ಬಹುಮತ ಸಾಬೀತಿಗೆ ಸಾಕಷ್ಟು ಸಂಖ್ಯಾಬಲವಿಲ್ಲದಿದ್ದರೂ ಸಹ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನ ನಿಡಿ ವಿವಾದಾತ್ಮಕ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಠಾಕ್ರೆ ಬಿಜೆಪಿ ಮುಖಂಡರಾದ ರಾಜ್ಯಪಾಲರಿಂದ ಇನ್ನೇನು ನಿರೀಕ್ಷಿಸುವಂತಿಲ್ಲ. ಎಂದರು.
ಅವರು ಅಯೋಧ್ಯೆ ವಿಚಾರ ಹಾಗೂ ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಬಿಎಪಿ ಶಿವಸೇನೆ ಮೈತ್ರಿಯ ತಳಮಳದ ಕುರಿತು ಮಾತನಾಡಿದರು.
ಚುನಾವಣೆ ಸಮೀಪಿಸಿದಾಗ ಮಾತ್ರ ಬಿಜೆಪಿ ಅಯೋಧ್ಯೆ ವಿವಾದದ ಬಗ್ಗೆ ಮಾತನಾಡುತ್ತದೆ ಎಂದ ಠಾಕ್ರೆ ಪಕ್ಷವು ಕರ್ನಾಟಕದಲ್ಲಿ ಅಧಿಕಾರಕ್ಕೇರಲು ಬಳಸಿದ ಶಕ್ತಿಯನ್ನೇ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಬಳಸಿಕೊಳ್ಳಬೇಕು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT