ಸಂಗ್ರಹ ಚಿತ್ರ 
ದೇಶ

ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್, ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಶತಃಸಿದ್ಧ: ಪಿ ಚಿದಂಬರಂ

ಪ್ರಜಾಪ್ರಭುತ್ವ ರಕ್ಷಣೆಗೆ ನಿಂತ ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್...ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಶತಃ ಸಿದ್ಧ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.

ನವದೆಹಲಿ: ಪ್ರಜಾಪ್ರಭುತ್ವ ರಕ್ಷಣೆಗೆ ನಿಂತ ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್...ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಶತಃ ಸಿದ್ಧ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಚಿದಂಬರಂ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಯ ಕುದುರೆ ವ್ಯಾಪರಕ್ಕೆ ಬಗ್ಗದೇ ತಮ್ಮ ತಮ್ಮ ಪಕ್ಷಗಳ ಪರ ನಿಂತಿದ್ದಾರೆ, ಆ ಮೂಲಕ ಪ್ರಜೆಗಳ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ವಿಶ್ವಾಸ ಮತ ಪ್ರಕ್ರಿಯೆ ಕೇವಲ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದರ ಕುರಿತು ಮಾತ್ರವಲ್ಲ. ಬದಲಿಗೆ ಯಾವ ಶಾಸಕರು ಪ್ರಜೆಗಳ ಆದೇಶಕ್ಕೆ ಮನ್ನಣೆ ನೀಡುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ತಮ್ಮ ಆರಿಸಿದ ಮತದಾರನಿಗೆ ಎಷ್ಟು ನಿಯತ್ತಾಗಿದ್ದಾರೆ ಎಂಬ ವಿಚಾರದ ಸ್ಪಷ್ಟನೆ ಎಂದು ಚಿದಂಬರಂ ವಿಶ್ಲೇಷಿಸಿದ್ದಾರೆ.
ವಿಶ್ವಾಸಮತವನ್ನು ವಿಳಂಬ ಮಾಡುವ ಮತ್ತು ತಂತ್ರಗಾರಿಕೆ ಮೂಲಕ ಶಾಸಕರ ಖರೀದಿಗೆ ಬಿಜೆಪಿ ಮಾಡುತ್ತಿರುವ ಪ್ರಯತ್ನಗಳಿಗೆ ಕಾಂಗ್ರೆಸ್ ಜೆಡಿಎಸ್ ಶಾಸಕರು ತಣ್ಣೀರೆರಚಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್
ಪ್ರಜಾಪ್ರಭುತ್ವ ರಕ್ಷಣೆಗೆ ನಿಂತ ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್ ಎಂದು ಹೇಳಿದ ಪಿ ಚಿದಂಬರಂ ಅವರು, ವಿಶ್ವಾಸಮತ ಯಾಚನೆಯನ್ನು ನೇರ ಪ್ರಸಾರ ಮಾಡುವಂತೆ ಆದೇಶ ಮಾಡುವ ಮೂಲಕ ಕಲಾಪದ ಪ್ರತೀ ಕ್ಷಣವನ್ನೂ ಮತದಾರ ವೀಕ್ಷಿಸುವಂತೆ ಮಾಡಿದೆ. ಆ ಮೂಲಕ ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿದಿದೆ. ಅಲ್ಲದೆ ಬಿಜೆಪಿಯ ಹಂಗಾಮಿ ಸ್ಪೀಕರ್ ಅವರ ಕಾರ್ಯವೈಖರಿಯನ್ನೂ ಜನತೆ ನೋಡುವಂತಾಗಲಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?