ಓಂ ಪ್ರಕಾಶ್‌ ರಾಜಭಾರ್‌ 
ದೇಶ

100 ಕೋಟಿ ಭಾರತೀಯರ ಡಿಎನ್ಎದಲ್ಲೇ ಭ್ರಷ್ಟಾಚಾರ ಇದೆ: ಯುಪಿ ಸಚಿವ

100 ಕೋಟಿ ಭಾರತೀಯರ ರಕ್ತದಲ್ಲೇ ಭ್ರಷ್ಟಾಚಾರ ಇದೆ ಎಂದು ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್‌ ರಾಜಭಾರ್‌ ಅವರು...

ಲಖನೌ: 100 ಕೋಟಿ ಭಾರತೀಯರ ರಕ್ತದಲ್ಲೇ ಭ್ರಷ್ಟಾಚಾರ ಇದೆ ಎಂದು ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್‌ ರಾಜಭಾರ್‌ ಅವರು ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮತ್ತೊಮ್ಮೆ ಮುಜುಗರ ಉಂಟುಮಾಡಲಾಗಿದೆ.
ಹಮೀರ್‌ಪುರ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ರಾಜಭಾರ್‌ ಅವರು, ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಅಷ್ಟು ಸುಲಭವಲ್ಲ; ಏಕೆಂದರೆ ಇದು ದೇಶಾದ್ಯಂತ ಅತಿಯಾಗಿ ಹರಡಿಕೊಂಡಿರುವ ಪಿಡುಗಾಗಿದೆ ಎಂದು ಹೇಳಿದರು. ಭ್ರಷ್ಟಾಚಾರ ಎನ್ನುವುದು ಎಷ್ಟು ಆಳವಾಗಿದೆ ಎಂದರೆ ಅದು ನೂರು ಕೋಟಿ ಭಾರತೀಯರ ಡಿಎನ್ ದಲ್ಲೇ ಇದೆ ಎಂದಿದ್ದಾರೆ.
ಸಮಾಜದಿಂದ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಸಚಿವರು ಹೇಳಿದ್ದಾರೆ. 
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ವಿರುದ್ದ ಖುದ್ದಾಗಿ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ ಎಂದು ರಾಜಭಾರ್‌ ತಿಳಿಸಿದರು.
ಇದೇ ಸಚಿವರು ಈ ಹಿಂದೆ ಸಿಎಂ ಯೋಗಿ ಆದಿತ್ಯನಾಥ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದ್ದರು. 
ರಾಜಭಾರ್‌ ಅವರ ಈ ಮಾತುಗಳು ಅಗ್ಗದ ಪ್ರಚಾರ ಪಡೆಯುವ ಉದ್ದೇಶದ್ದಾಗಿದೆ ಎಂದು ಬಿಜೆಪಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT