ಜಿಲ್ಲಾಧಿಕಾರಿ ಧರ್ಮರೆಡ್ಡಿ 
ದೇಶ

ಬರಿಗೈಯಲ್ಲಿ ಶೌಚಗುಂಡಿ ಸ್ವಚ್ಛಗೊಳಿಸಿ ಮೇಡಕ್ ಜಿಲ್ಲಾಧಿಕಾರಿ, ಸುದ್ದಿ ವೈರಲ್!

ತೆಲಂಗಾಣದ ಮೇಡಕ್ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಧರ್ಮರೆಡ್ಡಿ ಅವರು ಬರಿಗೈಯಲ್ಲಿ ಮಲಗುಂಡಿಯನ್ನು ಶುಚಿಗೊಳಿಸುವ ಮೂಲಕ ಸರಳತೆ ಮೆರೆದಿದ್ದಾರೆ...

ತೆಲಂಗಾಣ: ತೆಲಂಗಾಣದ ಮೇಡಕ್ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಧರ್ಮರೆಡ್ಡಿ ಅವರು ಬರಿಗೈಯಲ್ಲಿ ಮಲಗುಂಡಿಯನ್ನು ಶುಚಿಗೊಳಿಸುವ ಮೂಲಕ ಸರಳತೆ ಮೆರೆದಿದ್ದಾರೆ. 
ಸ್ವಚ್ಛ ಭಾರತ ಅಭಿಯಾನದಡಿ ಪುಣೆಯಲ್ಲಿ ಆಯೋಜಿಸಲಾಗಿದ್ದ ಬಯಲು ಮಲವಿಸರ್ಜನೆ ಮುಕ್ತ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಧರ್ಮರೆಡ್ಡಿ ಅವರು ಬರಿಗೈಯಲ್ಲಿ ಶೌಚಗುಂಡಿಯನ್ನು ಶುಚಿಗೊಳಿಸಿದ್ದಾರೆ. 
ಕಳೆದ ವರ್ಷ ಮೇಡಕ್ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲಾಗಿದೆ. ರಾಜ್ಯದಲ್ಲಿ ಬಯಲು ಶೌಚ ಮುಕ್ತವೆಂದು ಘೋಷಿಸಲ್ಪಟ್ಟ ಜಿಲ್ಲೆಗಳ ಪಟ್ಟಿಯಲ್ಲಿ ಮೇಡಕ್ 8ನೇ ಜಿಲ್ಲೆಯಾಗಿದೆ. 
ಮಲವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸುವುದರ ಕುರಿತಂತೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮೊದಲು ಸಂಬಂಧಿತ ಸಿಬ್ಬಂದಿ ಸಂಪೂರ್ಣ ಪ್ರಕ್ರಿಯೆಯನ್ನು ಪ್ರದರ್ಶಿಸಿದ್ದರು. ಬಳಿಕ ಧರ್ಮರೆಡ್ಡಿ ಅವರು ನೇರವಾಗಿ ಮಲಗುಂಡಿಗೆ ಇಳಿದು ಸಾವಯವ ಗೊಬ್ಬರವನ್ನು ಬರಿಗೈಯಲ್ಲಿ ಹಿಡಿದು ತೋರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT