ನಿಫಾಹ್ ವೈರಾಣು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಚಿತ್ರ 
ದೇಶ

ನಿಫಾಹ್ ವೈರಾಣು : ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ - ಜೆ. ಪಿ. ನಡ್ಡಾ

ಕೇರಳದಲ್ಲಿ ನಿಫಾಹ್ ವೈರಾಣು ಸೋಂಕುವಿನಿಂದಾಗಿ 10 ಮಂದಿ ಸಾವನ್ನಪ್ಪಿದ್ದು, ಇದರ ನಿಯಂತ್ರಣಕ್ಕಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡದಂತೆ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ : ಕೇರಳದಲ್ಲಿ ನಿಫಾಹ್ ವೈರಾಣು ಸೋಂಕುವಿನಿಂದಾಗಿ 10 ಮಂದಿ ಸಾವನ್ನಪ್ಪಿದ್ದು, ಇದರ ನಿಯಂತ್ರಣಕ್ಕಾಗಿ  ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡದಂತೆ ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಮನವಿ ಮಾಡಿಕೊಂಡಿದ್ದಾರೆ.

ಕೇರಳದಲ್ಲಿಯೇ ಏಕಾಏಕಿ ನಿಫಾಹ್ ವೈರಾಣು  ಕಾಣಿಸಿಕೊಂಡಿರುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ ಸ್ಥಳೀಯ ಘಟನೆ ಎಂಬಂತೆ ಗಮನ ಕೇಂದ್ರಿಕರಿಸಿದ್ದು,  ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು  ನಡ್ಡಾ ಹೇಳಿದ್ದಾರೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದನ್ ಮತ್ತು  ಐಸಿಎಂಆರ್  ಮಹಾನಿರ್ದೇಶಕ  ಡಾ. ಬಲರಾಮ್ ಭಾರ್ಗವ  ಅವರೊಂದಿಗೆ ಕೇರಳ ಪರಿಸ್ಥಿತಿ  ಪರಾಮರ್ಶೆ ನಡೆಸಿದ ಕೇಂದ್ರ ಸಚಿವರು, ಕೇರಳ ಸರ್ಕಾರಕ್ಕೆ ಅಗತ್ಯ ಎಲ್ಲಾ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿರುವುದಾಗಿ ತಿಳಿಸಿದ್ದಾರೆ.

ನಿಫಾಹ್ ವೈರಾಣು ಸೋಂಕುವಿನಿಂದಾಗಿ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಕೊಝೀಕೊಡುವಿನ ಅನೇಕ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕೇರಳದಲ್ಲಿನ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ  ಬಹು ಹಂತದ ಕೇಂದ್ರೀಯ ತಂಡ ಆಗಮಿಸಿದ್ದು, ನಿರಂತರವಾಗಿ ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದೆ.

ಸೋಂಕುವಿನಿಂದ ಮೃತಪಟ್ಟಿದ್ದ  ಪೆರಮ್ ಬ್ರಾದ ಮನೆಯೊಂದಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು,ಕುಟುಂಬವು ನೀರಿಗಾಗಿ ಬಳಸುತ್ತಿದ್ದ  ಬಾವಿಗಳಲ್ಲಿ ಅನೇಕ ಬಾವಲಿಗಳು ಕಂಡುಬಂದಿವೆ. ಕೆಲ ಬಾವಲಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳದಿಂದ 60 ವಿವಿಧ ಪ್ರಕಾರದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ.  ಎರಡು ಪ್ರಕರಣಗಳಲ್ಲಿ ಇದರಿಂದಾಗಿಯೇ ಸಾವನ್ನಪ್ಪಿರುವುದು ದೃಢಪಟ್ಟಿದೆ. ನಿಫಾಹ್ ವೈರಾಣು ಹಿನ್ನೆಲೆಯಲ್ಲಿ ಕೆಲವರನ್ನು ಕ್ಯಾಲಿಕಟ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಚಿವಾಲಯದ ಮಾಹಿತಿ ನೀಡಿದೆ.

ತುರ್ತು ನಿರ್ವಹಣೆಗಾಗಿ ಎನ್ ಸಿಡಿಸಿಯ  ಸಂಚಾರಿ ಸಾರ್ವಜನಿಕರ ಆರೋಗ್ಯ ತಂಡವನ್ನು  ಕೋಝಿಕೊಡುವಿನ ಶಾಖೆಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ನಿಯೋಜಿಸಿದೆ.







Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT