ಜಾತ್ಯಾತೀತತೆ ಅಪಾಯದಲ್ಲಿದೆ, ಭಾರತಕ್ಕಾಗಿ ಪ್ರಾರ್ಥಿಸೋಣ: ದೆಹಲಿ ಆರ್ಚ್ ಬಿಷಪ್ 
ದೇಶ

ಜಾತ್ಯಾತೀತತೆ ಅಪಾಯದಲ್ಲಿದೆ, ಭಾರತಕ್ಕಾಗಿ ಪ್ರಾರ್ಥಿಸೋಣ: ದೆಹಲಿ ಆರ್ಚ್ ಬಿಷಪ್

2019 ರ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ರಾಜಕೀಯ ಪಕ್ಷಗಳ ಜೊತೆಗೆ ಕೆಲವು ಧಾರ್ಮಿಕ ಸಂಸ್ಥೆಗಳೂ ಸಹ ಚುನಾವಣೆಗೆ ಸಜ್ಜುಗೊಳ್ಳುತ್ತಿವೆ.

ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ರಾಜಕೀಯ ಪಕ್ಷಗಳ ಜೊತೆಗೆ ಕೆಲವು ಧಾರ್ಮಿಕ ಸಂಸ್ಥೆಗಳೂ ಸಹ ಚುನಾವಣೆಗೆ ಸಜ್ಜುಗೊಳ್ಳುತ್ತಿವೆ. 
ಚುನಾವಣಾ ದೃಷ್ಟಿಯಿಂದ ಎಲ್ಲಾ ಪ್ರೀಸ್ಟ್ ಗಳಿಗೂ ಪತ್ರ ಬರೆದಿರುವ ದೆಹಲಿಯ ಆರ್ಚ್ ಬಿಷಪ್ ಅನಿಲ್ ಕೌಟೊ, " ದೇಶದ ಜಾತ್ಯಾತೀತತೆ ಅಪಾಯದಲ್ಲಿದ್ದು, ಪ್ರತಿ ಶುಕ್ರವಾರ ಉಪವಾಸ ಮಾಡಿ ಜಾತ್ಯಾತೀತತೆಗಾಗಿ ಪ್ರಾರ್ಥಿಸಬೇಕೆಂದು ಸೂಚನೆ ನೀಡಿದ್ದಾರೆ. 
ದೇಶದಲ್ಲಿರುವ ಪ್ರಕ್ಷುಬ್ಧ ರಾಜಕೀಯ ವಾತಾವರಣ ಉಂಟಾಗಿದ್ದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಧಕ್ಕೆ ಉಂಟಾಗಿವೆ, ಆದ್ದರಿಂದ ನಾವು ದೇಶದ ಜಾತ್ಯಾತೀತತೆ ಉಳಿಯಲು ಪ್ರಾರ್ಥನೆ ಮಾಡುವ ಪವಿತ್ರ ಕೆಲಸವನ್ನು ಮಾಡಬೇಕಾಗಿದೆ ಎಂದು ಆರ್ಚ್ ಬಿಷಪ್ ಹೇಳಿದ್ದಾರೆ. 
2019 ರಲ್ಲಿ ನಾವು ಹೊಸ ಸರ್ಕಾರವನ್ನು ಪಡೆಯಲಿದ್ದೇವೆ, ನಮ್ಮ ದೇಶಕ್ಕಾಗಿ ಪ್ರಾರ್ಥನೆ ಸಲ್ಲಿಸೋಣ ಎಂದು ಪತ್ರದಲ್ಲಿ ಆರ್ಚ್ ಬಿಷಪ್ ಕರೆ ನೀಡಿದ್ದಾರೆ. ಈ ಬಗ್ಗೆ ಬಿಷಪ್ ಅವರ ಕಾರ್ಯದರ್ಶಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು ಪ್ರತಿ ಚುನಾವಣೆಯಲ್ಲಿಯೂ ದೇಶಕ್ಕಾಗಿ ಪ್ರಾರ್ಥನೆ ಮಾಡುವ ಪರಿಪಾಠ ಹೊಂದಿದ್ದೇವೆ, ಆದರೆ ಈ ಬಾರಿ ಅದನ್ನು ರಾಜಕೀಯಗೊಳಿಸಲಾಗುತ್ತಿದೆಯಷ್ಟೇ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT