ಸ್ಟರ್ಲೈಟ್ ಪ್ರತಿಭಟನೆ 
ದೇಶ

ಕನಿಷ್ಟ ಒಬ್ಬರಾದರೂ ಸಾಯಬೇಕು: ಸ್ಟರ್ಲೈಟ್ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿ

ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಅಮಾನುಷ ಹೇಳಿಕೆ ವೈರಲ್

ತೂತುಕುಡಿ: ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ  ಕಾರ್ಯಾಚರಣೆ ನಿಲ್ಲಿಸುವಂತೆ  ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಅಮಾನುಷ ಹೇಳಿಕೆ ವೈರಲ್ ಆಗತೊಡಗಿದೆ. 
ಎನ್ ಡಿಟಿವಿ ವರದಿಯ ಪ್ರಕಾರ ಪ್ರತಿಭಟನೆ ವೇಳೆ ಪೊಲೀಸ್ ಬಸ್ ಮೇಲೆ ನಿಂತಿದ್ದ ಅಧಿಕಾರಿಯೊಬ್ಬರು  "ಕನಿಷ್ಟ ಒಬ್ಬರಾದರೂ ಸಾಯಬೇಕೆಂದು ಹೇಳಿದ್ದು, ಈ ಹೇಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಫೈರಿಂಗ್ ನಡೆಸಿದ್ದಾರೆ. ಆದರೆ ಈ ವ್ಯಕ್ತಿ ಮಾಡಿದ ಫೈರಿಂಗ್ ನಿಂದ ಬುಲೆಟ್ ಯಾರಿಗಾದರೂ ಹೊಕ್ಕಿದೆಯೇ ಇಲ್ಲವೇ, ಈ ಪೊಲೀಸ್ ಅಧಿಕಾರಿಯ ಬದಲು ಬೇರೆ ಯಾರಾದರೂ ಫೈರಿಂಗ್ ನಡೆಸಿದ್ದಾರೆಯೇ ಎಂಬುದು ಸ್ಪಷ್ಟವಾಗುತ್ತಿಲ್ಲ. 
ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್ ನಿಂದಾಗಿ  11 ಮಂದಿ  ಸಾವನ್ನಪ್ಪಿದ್ದು,  50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ನಡೆಸಿದ ಗೋಲಿಬಾರ್ ಗೆ ಓರ್ವ ಬಾಲಕಿಯೂ ಮೃತಪಟ್ಟಿದ್ದಾಳೆ.  ವಿಷಯುಕ್ತ ಅನಿಲ ಹೊರಸೂಸುವಿಕೆಯಿಂದ ನಾನಾ ಬಗೆಯ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಿರುವ ತಾಮ್ರ ಮಿಶ್ರಿತ ಘಟಕ ಸ್ಟೆರ್ಲೈಟ್ ಕಂಪನಿ ಮುಚ್ಚುವಂತೆ ಆಗ್ರಹಿಸಿ ನೂರಾರು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT