ಪ್ರಾದೇಶಿಕ ಪಕ್ಷಗಳು 
ದೇಶ

ಪ್ರಧಾನಿ ಮೋದಿ ವಿರುದ್ಧ ಒಂದಾದ ಪ್ರಾದೇಶಿಕ ಪಕ್ಷಗಳ ಶಕ್ತಿ ಪ್ರದರ್ಶನ!

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಈ ಸಮಾರಂಭಕ್ಕೆ ಪ್ರಾದೇಶಿಕ ಪಕ್ಷಗಳ ನಾಯಕರು, ಒಂದಾಗಿ ಶಕ್ತಿ ಪ್ರದರ್ಶಿಸಿವೆ...

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಈ ಸಮಾರಂಭಕ್ಕೆ ಪ್ರಾದೇಶಿಕ ಪಕ್ಷಗಳ ನಾಯಕರು, ಒಂದಾಗಿ ಶಕ್ತಿ ಪ್ರದರ್ಶಿಸಿವೆ. 
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಟಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಣೆಸಲು ಒಂದಾಗಿದ್ದು ತಮ್ಮ ಬಲ ಪ್ರದರ್ಶನಕ್ಕೆ ಕುಮಾರಸ್ವಾಮಿ ಅವರು ಪ್ರಮಾಣ ವಚನ ಸಮಾರಂಭ ಇದಕ್ಕೆ ಸಾಕ್ಷಿಯಾಯಿತು. 
ಸಮಾರಂಭಕ್ಕೆ ಪ್ರಮಾಣವಚನ ಸ್ವೀಕಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್ಪಿಯ ಮಾಯಾವತಿ, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಇನ್ನಿತರೆ ಗಣ್ಯಾತಿ ಗಣ್ಯರು ಭಾಗವಹಿಸಿದ್ದು ನಂತರ ವೇದಿಕೆ ಮೇಲೆ ತಾವೆಲ್ಲ ಒಟ್ಟಾಗಿರುವುದಾಗಿ ಬಲ ಪ್ರದರ್ಶನ ಮಾಡಿವೆ. 
ಇನ್ನು ಬಿಜೆಪಿ ವಿರುದ್ಧ ಪ್ರಾದೇಶಿಕ ಪಕ್ಷಗಳೆಲ್ಲಾ ಒಟ್ಟಾಗಿ ಸಂಯುಕ್ತ ರಂಗ ರಚನೆಗೆ ಮುಂದಾಗಿವೆ. ಇದರಲ್ಲಿ ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು, ಕೆಸಿ ಚಂದ್ರಶೇಕರ್ ರಾವ್, ಅಖಿಲೇಶ್ ಯಾದವ್, ಮಾಯಾವತಿ ಇವರೆಲ್ಲಾ ಮುಂಚೂಣಿ ನಾಯಕರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT