ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು
ನವದೆಹಲಿ; ಲೋಕಸಭಾ ಸಂಸದ ಸ್ಥಾನಕ್ಕೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮಂಗಳವಾರ ಅಂಗೀಕರಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಲೋಕಸಭಾ ಸಂಸದ ಸ್ಥಾನಕ್ಕೆ ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರು ರಾಜೀನಾಮೆ ನೀಡಿದ್ದರು.
ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿಯಾಗಿ ಹಾಗೂ ಶಿಕಾರಿಪುರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಶಿಕಾರಿಪುರದಲ್ಲಿ 35,000 ಮತಗಳ ಅಂತರದಿಂದ ಬಿಎಸ್'ವೈ ಗೆಲವು ಸಾಧಿಸಿದ್ದರು.
ಇದರಂತೆ ಶ್ರೀರಾಮುಲು ಅವರು ಬಾದಾಮಿ ಹಾಗೂ ಮೊಣಕಾಲ್ಮೂರು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. ಆದರೆ, ಮೊಣಕಾಲ್ಮೂರು ಕ್ಷೇತ್ರದಲ್ಲಿ 25,000 ಮತಗಳ ಅಂತರದಿಂದ ಗೆಲವು ಸಾಧಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos