ಕಮಲ್ ನಾಥ್ 
ದೇಶ

ಮಧ್ಯಪ್ರದೇಶ ಚುನಾವಣೆ: ಬಿಜೆಪಿಗೆ ಸೆಡ್ಡು ಹೊಡೆಯಲು ಎಸ್ ಪಿ ಜೊತೆ ಕಾಂಗ್ರೆಸ್ ಮೈತ್ರಿ ?

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಭೂಪಾಲ್ : ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್, ಈ ಹಿಂದೆ ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಸಮಾಜವಾದಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ಅದೇ ರೀತಿ ಮಧ್ಯ ಪ್ರದೇಶ ಚುನಾವಣೆಯಲೂ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಎಸ್ ಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದನ್ನು ಅವರು ನೆನಪಿಸಿಕೊಂಡರು. ಆದಾಗ್ಯೂ ಬಿಜೆಪಿ 325 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದುಕೊಂಡಿತ್ತು.

2014 ರ ಚುನಾವಣೆಯಲ್ಲಿ ಬಿಜೆಪಿ ಶೇ. 31 ರಷ್ಟು ಮತಗಳನ್ನು ಪಡೆದುಕೊಂಡಿದ್ದರೆ, ಶೇ 69 ಮತಗಳು ಅವರ ವಿರುದ್ಧ ಚಲಾವಣೆ ಆಗಿದ್ದವು.  ಜಾತ್ಯತೀತ ಮತಗಳು ವಿಭಜನೆಯಾಗಬಾರದು ಎಂಬ ಉದ್ದೇಶದಿಂದ ಮೈತ್ರಿ ಅನಿವಾರ್ಯವಾಗಿದ್ದು, ಶೀಘ್ರದಲ್ಲಿಯೇ ಇತರ ಪಕ್ಷಗಳೊಂದಿಗೂ ಮಾತುಕತೆ ನಡೆಸುವುದಾಗಿ ಕಮಲ್ ನಾಥ್ ತಿಳಿಸಿದರು.

 ಮಧ್ಯಪ್ರದೇಶ ಚುನಾವಣೆಯಲ್ಲೂ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು  ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್  ವಿಶ್ವಾಸ ವ್ಯಕ್ತಪಡಿಸಿದರು.

ಮಧ್ಯಪ್ರದೇಶದಲ್ಲಿ 2003 ರಿಂದಲೂ ಬಿಜೆಪಿ ಅಧಿಕಾರದಲ್ಲಿದೆ. ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಲ್ಲಿ ಆಡಳಿತ ವಿರೋಧಿ ಅಲೆ ಕಂಡುಬಂದಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್  ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.

ಮಧ್ಯಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳಿಗೆ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ  ತಲಾ 19 ಸ್ಥಾನಗಳಲ್ಲಿ ಜಯ ಗಳಿಸಿದ್ದವು.  ಉಭಯ ಪಕ್ಷಗಳು ಶೇ.46 ರಷ್ಟು  ಸಮಾನವಾದ ಮತಗಳನ್ನು ಗಳಿಸಿಕೊಂಡಿದ್ದವು.




Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT