ಶೇಖ್ ಹಸೀನಾ, ನರೇಂದ್ರಮೋದಿ 
ದೇಶ

1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ವೇಳೆ ಭಾರತದ ಸಹಾಯ ಮರೆಯಲು ಸಾಧ್ಯವಿಲ್ಲಾ- ಶೇಖ್ ಹಸೀನಾ

ಬಾಂಗ್ಲಾದೇಶದ ಬಿಕ್ಕಟ್ಟಿನ ಸಂದರ್ಭದಲ್ಲಿ ಅದರ ಪರ ನಿಂತಿರುವ ಭಾರತವನ್ನು ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ಪ್ರಶಂಸಿದ್ದಾರೆ. ಸ್ನೇಹಪರ ರೀತಿಯಲ್ಲಿ ಮಾತುಕತೆಗಳು ದ್ವಿಪಕ್ಷೀಯ ಸಮಸ್ಯೆಗಳ ನಿರ್ಣಯಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.

ಶಾಂತಿನಿಕೇತನ್ :ಬಾಂಗ್ಲಾದೇಶದ ಬಿಕ್ಕಟ್ಟಿನ  ಸಂದರ್ಭದಲ್ಲಿ ಅದರ ಪರ ನಿಂತಿರುವ ಭಾರತವನ್ನು  ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ಪ್ರಶಂಸಿದ್ದಾರೆ.  ಸ್ನೇಹಪರ ರೀತಿಯಲ್ಲಿ ಮಾತುಕತೆಗಳು ದ್ವಿಪಕ್ಷೀಯ ಸಮಸ್ಯೆಗಳ ನಿರ್ಣಯಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.

1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ವೇಳೆ ತನ್ನ ಪರ ಭಾರತ ಹೇಗೆ ನಿಂತಿತ್ತು ಎಂಬುದನ್ನು ಮರೆಯಲು ಸಾಧ್ಯವಿಲ್ಲಾ ಎಂದಿರುವ ಅವರು, ಈ ಹಿಂದೆ ಗಡಿ ಪ್ರದೇಶ ಒಪ್ಪಂದದ ಮೂಲಕ  ಗಡಿ ವಿವಾದಗಳನ್ನು  ಉಭಯ ದೇಶಗಳು ಬಗೆಹರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಸ್ನೇಹಪರ ರೀತಿಯಲ್ಲಿ ಹಲವು ದ್ವಿಪಕ್ಷೀಯ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಲಾಗಿದೆ. ಆದಾಗ್ಯೂ, ಕೆಲ ವಿಷಯಗಳ ಬಗ್ಗೆ ಗಮನ ಹರಿಸಬೇಕಾದ್ದರೂ ಈ  ಕಾರ್ಯಕ್ರಮದಲ್ಲಿ ಅವುಗಳನ್ನು ಪ್ರಸ್ತಾಪಿಸಲು ಬಯಸುವುದಿಲ್ಲ ಎಂದು ಹಸೀನಾ ಹೇಳಿದ್ದಾರೆ.

ವಿಶ್ವ ಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಲಾಗಿರುವ ಬಾಂಗ್ಲಾದೇಶ ಭವನ ಉಭಯ ದೇಶಗಳ ನಡುವಿನ ಸಾಂಸ್ಕೃತಿಕ  ಬಾಂಧವ್ಯದ ಕುರುಹು ಆಗಿದ್ದು, ಅನೇಕ ಸಂಕಷ್ಟದ ಸಂದರ್ಭಗಳಲ್ಲಿ ತನ್ನ ಬೆನ್ನೆಲುಬು ಆಗಿ ನಿಂತಿರುವ ಭಾರತವನ್ನು ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

ಬಡತನ ಬಾಂಗ್ಲಾದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು, ಅದರ ನಿವಾರಣೆಗಾಗಿ ಶ್ರಮಪಡಲಾಗುತ್ತಿದೆ.  2041 ರೊಳಗೆ ಬಾಂಗ್ಲಾದೇಶವನ್ನು ಸುವರ್ಣ ಬಾಂಗ್ಲಾದೇಶವನ್ನಾಗಿ ಅಭಿವೃದ್ದಿ ಪಡಿಸುವ ಗುರಿ ಹೊಂದಿರುವುದಾಗಿ ಹಸೀನಾ ತಿಳಿಸಿದರು.

ಭಾರತ ಮತ್ತು ಬಾಂಗ್ಲಾದೇಶಗಳೆರಡಕ್ಕೂ ರಾಷ್ಟ್ರಗೀತೆ ರಚಿಸಿರುವ ವಿಶ್ವ ಕವಿ ರವೀಂದ್ರ ನಾಥ ಠಾಗೋರ್, ಉಭಯ ದೇಶಗಳಿಗೂ ಸೇರಿದವರಾಗಿದ್ದಾರೆ. ಬಾಂಗ್ಲಾದೇಶದಲ್ಲಿಯೂ ಅನೇಕ ಕವಿತೆಗಳನ್ನು ರಚಿಸಿದ್ದಾರೆ. ಅದಕ್ಕಾಗಿಯೇ ನಾವು ಅವರ ಮೇಲೆ ಹೆಚ್ಚಿನ ಹಕ್ಕನ್ನು ಹೊಂದುತ್ತೇವೆ ಎಂದರು.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT