ನವದೆಹಲಿ: ಉತ್ತರ ಪ್ರದೇಶದಲ್ಲಿ ಎಸ್ ಪಿ, ಬಿಎಸ್ ಪಿ ಮೈತ್ರಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲಿನ ಸಂಗತಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಎಸ್ ಪಿ-ಬಿಎಸ್ ಪಿ ಮೈತ್ರಿ ಬಿಜೆಪಿಗೆ ಸವಾಲಿನ ಸಂಗತಿಯಾಗಿದ್ದರೂ ಉತ್ತರ ಪ್ರದೇಶದಲ್ಲಿ ರಾಯ್ ಬರೇಲಿ ಅಥವಾ ಅಮೇಥಿಯಲ್ಲಿ ಒಂದನ್ನು ಬಿಜೆಪಿ ಗೆಲ್ಲುತ್ತದೆ ಎಂದು ಪತ್ರಕರ್ತರೊಂದಿಗೆ ಮಾತನಾಡಿರುವ ಅಮಿತ್ ಶಾ ಹೇಳಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದಲ್ಲಿನ ಮೈತ್ರಿಯ ಬಗ್ಗೆಯೂ ಬಿಜೆಪಿ ರಾಷ್ಟ್ರಾಧ್ಯಕ್ಷರು ಮಾತನಾಡಿದ್ದು, ಹಳೆಯ ಮಿತ್ರನೊಂದಿಗಿನ ಮೈತ್ರಿಯನ್ನು ಕಳೆದುಕೊಳ್ಳುವುದಕ್ಕೆ ಸಿದ್ಧವಿಲ್ಲ ಎಂದು ಹೇಳಿದ್ದಾರೆ.
2019 ರಲ್ಲಿ ಶಿವಸೇನೆಯನ್ನು ಎನ್ ಡಿಎಯಿಂದ ಹೊರಗಿಡುವುದು ನಮಗೆ ಬೇಕಿಲ್ಲ, ಆದರೆ ಶಿವಸೇನೆ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ನಾವು ಶಿವಸೇನೆ ವಿರುದ್ಧ ಮಹಾರಾಷ್ಟ್ರದಲ್ಲಿ ಸ್ಪರ್ಧಿಸಬೇಕಾಗುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ. 2019 ರಲ್ಲಿ ಎನ್ ಡಿಎ ವಿರುದ್ಧವಾಗಿ ಸ್ಪರ್ಧಿಸಲು ಸಾಧ್ಯವಾಗದೇ ವಿರೋಧ ಪಕ್ಷಗಳೆಲ್ಲವೂ ಒಟ್ಟಾಗಿವೆ. ವಿರೋಧ ಪಕ್ಷಗಳ ಪೈಕಿ ಇರುವ ಪ್ರಾದೇಶಿಕ ಪಕ್ಷಗಳು ಕೆಲವೇ ರಾಜ್ಯಗಳಿಗೆ ಸೀಮಿತವಾಗಿವೆ ನಮ್ಮನ್ನು ಸೋಲಿಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos