ಸಂಗ್ರಹ ಚಿತ್ರ 
ದೇಶ

ನಿಪಾಹ್ ವೈರಸ್ ಗೆ ಕೇರಳದಲ್ಲಿ ಮತ್ತೊಂದು ಬಲಿ, ಸಾವಿನ ಸಂಖ್ಯೆ 13ಕ್ಕೆ ಏರಿಕೆ!

ದೇವರನಾಡು ಕೇರಳದಲ್ಲಿ ಮಾರಣಾಂತಿಕ ನಿಪಾಹ್ ವೈರಾಣು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಕೊಯಿಕ್ಕೋಡ್: ದೇವರನಾಡು ಕೇರಳದಲ್ಲಿ ಮಾರಣಾಂತಿಕ ನಿಪಾಹ್ ವೈರಾಣು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಕೇರಳದ ಕೊಯಿಕ್ಕೋಡ್ ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಿಪಾಹ್ ವೈರಾಣು ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 26 ವರ್ಷದ ಅಬಿನ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆ ಮೂಲಕ ನಿಪಾಹ್ ವೈರಾಣು ಸೊಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾದಂತಾಗಿದೆ. 
ಇನ್ನು ಮೃತ ಅಬಿನ್, ಕೇರಳದ ಪಾಲಾಳಿ ಜಿಲ್ಲೆಯ ನಿವಾಸಿಯಾಗಿದ್ದು, ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಈತ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ. ನಿನ್ನೆಯಷ್ಟೇ ಸರ್ಕಾರಿ ಆಸ್ಪತ್ರೆಯಲ್ಲಿ ಕಲ್ಯಾಣಿ ಎಂಬ ಮಹಿಳೆ ಇದೇ ನಿಪಾಹ್ ವೈರಾಣು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರು. ಇನ್ನು ಇದಕ್ಕೂ ಮೊದಲು ಸೋಂಕು ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನರ್ಸ್ ಲಿನಿ ಕೂಡ ಇದೇ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದು ಆತಂಕಕ್ಕೆ ಕಾರಣವಾಗಿದ್ದು ಮಾತ್ರವಲ್ಲದೇ ದೇಶಾದ್ಯಂತ ವ್ಯಾಪಕ ಚರ್ಚೆಗೂ ಕಾರಣವಾಗಿತ್ತು.
ಅಂತೆಯೇ ಮೊದಲಿಗೆ ಸೋಂಕು ಕಾಣಿಸಿಕೊಂಡ ಕೊಯಿಕ್ಕೋಡ್ ನ ಪೆರಂಬರಾದಲ್ಲಿ ಇನ್ನೂ 16 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕು ಪೀಡಿತರೆಲ್ಲರ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, ಸೋಂಕು ಪೀಡಿತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಿಗೂಢವಾಗಿ ಹಬ್ಬುತ್ತಿರುವ ಈ ಮಾರಣಾಂತಿಕ ಸೋಂಕಿನ ಪ್ರಸರಣಕ್ಕೆ ಕಾರಣವಾದ ಅಂಶ ಯಾವುದು ಎಂದು ಈ ವರೆಗೂ ಪತ್ತೆಯಾಗಿಲ್ಲ. ಈ ಹಿಂದೆ ಬಾವಲಿ ಮತ್ತು ಪ್ರಾಣಿಗಳ ಮೂಲಕ ಸೋಂಕು ಹರಡುತ್ತಿದೆ ಎಂದು ಶಂಕಿಸಲಾಗಿತ್ತಾದರೂ ಅಧ್ಯಯನಗಳು ಮತ್ತು ಸಂಶೋಧನೆಗಳೂ ಈ ವಿಚಾರವನ್ನು ಅಲ್ಲಗಳೆದಿದ್ದವು. ಈ ಬಗ್ಗೆ ಇನ್ನೂ ಸಂಶೋಧನೆಗಳು ಮುಂದುವರೆದಿದ್ದು, ಸೋಂಕು ಪ್ರಸರಣಕ್ಕೆ ಕಾರಣವಾದ ಅಂಶಕ್ಕಾಗಿ ಕೇರಳ ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ.
ಅಲ್ಲದೆ ಕೇಂದ್ರ ಸರ್ಕಾರದ ನೆರವು ಕೂಡ ಕೋರಲಾಗಿದ್ದು, ಈಗಾಗಲೇ ಕೇಂದ್ರ ನುರಿತ ತಜ್ಞರ ತಂಡ ಕೇರಳದಲ್ಲಿ ಬೀಡು ಬಿಟ್ಟಿವೆ. ಇನ್ನು ನಿಪಾಹ್ ವೈರಾಣು ತಡೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಆಸ್ಟ್ರೇಲಿಯಾ ನೆರವು ಕೂಡ ಕೋರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT