ದೇಶ

ದಲಿತರ ಉದ್ದಾರಕ್ಕಾಗಿ ಸರ್ಕಾರ ಪ್ರಯತ್ನಿಸುತ್ತಿದ್ದರೂ ಕಾಂಗ್ರೆಸ್ ಅಪಹಾಸ್ಯ- ಪ್ರಧಾನಿ ಮೋದಿ

Nagaraja AB

ಉತ್ತರ ಪ್ರದೇಶ:  ಕೇಂದ್ರಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದಲಿತರ ಉದ್ದಾರಕ್ಕಾಗಿ  ಪ್ರಯತ್ನಿಸುತ್ತಿದ್ದರೂ ಕಾಂಗ್ರೆಸ್  ಅಪಹಾಸ್ಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದಾರೆ.

ಬಾಗ್ಪತ್  ನಲ್ಲಿಂದು  11 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ 135 ಕಿಲೋ ಮೀಟರ್ ಉದ್ದದ ಪೂರ್ವ ಫೆರಿಪೆರಲ್ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ದೇಶಕ್ಕೆ ಸಮರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ದಲಿತರು,  ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರ  ಅಭಿವೃದ್ದಿಗಾಗಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದರು.
ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ  ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ, ಆದಾಗ್ಯೂ, ಕಾಂಗ್ರೆಸ್ ಮತ್ತು ಅದರ ಮೈತ್ರಿ ಪಕ್ಷಗಳು ಸರ್ಕಾರದ ಪ್ರಯತ್ನಗಳನ್ನು ಅಪಹಾಸ್ಯ ಮಾಡುತ್ತಿವೆ ಎಂದು ಅಪಾದಿಸಿದರು.
SCROLL FOR NEXT